ಇದೀಗ ಜಾನುವಾರುಗಳಿಗೆ ಹೆಚ್ಚು ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ.
ಹೀಗಾಗಿ ಇದನ್ನ ತಡೆಗಟ್ಟುವ ಸಲುವಾಗಿ 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದರು. ಈ ಸೋಂಕಿನಿಂದಾಗಿ ಮರಣ ಹೊಂದಿದ ರಾಸುಗಳ ಮಾಲೀಕರಿಗೆ ಪರಿಹಾರವಾಗಿ 55 ಕೋಟಿ ರೂ. ಮಂಜೂರು ಮಾಡಲಾಗಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆ, ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ, ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಹಾಯ, ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಂಪೂರ್ಣ ಶುಲ್ಕ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ ಗಳ ಸಹಾಯ ಧನವನ್ನು ಡಿಬಿಟಿ ಮೂಲಕ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷದಿಂದ 2 ಲಕ್ಷ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಮಠ ಮತ್ತು ಮಂದಿರಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈಗಾಗಲೇ ಮಠ-ಮಂದಿರಗಳ ಅಭಿವೃದ್ಧಿಗೆ ಬಜೆಟ್ನಲ್ಲಿ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನರಾಮ್ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಎಲೆಕ್ರಿಕ್ ತಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು, ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ ಎಂದರು.
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…
ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…