Karnataka Budget 2022 : ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ. ಅನುದಾನ – VIshwanews24

Featured, ರಾಜ್ಯ ನ್ಯೂಸ್

Karnataka Budget 2022 : ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ. ಅನುದಾನ – VIshwanews24

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುತಮ್ಮ ಚೊಚ್ಚಲ ಬಜೆಟ್ (ಅನ್ನು ಮಂಡಿಸುತ್ತಿದ್ದಾರೆ.

ರಾಜ್ಯದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಥಮ ಹಂತದ ಕಾಮಗಾರಿಗಳನ್ನು ಪ್ರಸಕ್ತ ಸಾಳಿನಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗುವುದು.

ಯೋಜನೆಯ ಎರಡನೇ ಹಂತದ 260 ಕಿ.ಮೀ ಉತ್ತದ ಗುರುತ್ವ ಕಾಲುವೆ ಟಿ.ಜಿ ಹಳ್ಳಿ-ರಾಮನಗರ ಫೀಡರ್, ಮಧುಗಿರಿ ಫೀಡರ್ ಹಾಗೂ ಗೌರಿಬಿದನೂರು ಫೀಡರ್ ಕಾಲುವೆ ಕಾಮಗಾರಿಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಿ ಮುಂದಿನ ವರ್ಷದ ಮುಂಗಾರು ಹಂಗಾಮಿನಲ್ಲಿ ನೀರು ಪೂರೈಸಲು ಕ್ರಮ ಜರುಗಿಸಲು ಹಾಗೂ ಯೋಜನೆಯ ಉಳಿಕೆ ಕಾಮಗಾರಿಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು. ಯೋಜನೆಯ ಅನುಷ್ಠಾನಕ್ಕೆ 3,000 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Karnataka Budget 2022 : ಕಾಶಿ ಯಾತ್ರೆಗೆ 5,000 ಸಹಾಯ ಧನ : ಸಿಎಂ ಬೊಮ್ಮಾಯಿ  -Vishwanews24

Leave a Reply