Featured

Karnataka Budget 2023  : ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನಕ್ಕೆ ‘ಮತ್ಸ್ಯಸಿರಿ’ ಯೋಜನೆ ಘೋಷಣೆ – Vishwanews24

Karnataka Budget 2023  : ಆಳ ಸಮುದ್ರ ಮೀನುಗಾರಿಕೆಗೆ ಉತ್ತೇಜನಕ್ಕೆ ‘ಮತ್ಸ್ಯಸಿರಿ’ ಯೋಜನೆ ಘೋಷಣೆ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡುತ್ತಿದ್ದಾರೆ.

ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ.ಇದ್ದು, ಇದೇ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ. ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ ಎಂದು ಹೇಳಿದ್ದಾರೆ.

ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಲು​ 40 ಕೋಟಿ ರೂ. ಮೀಸಲಿಡಲಾಗುವುದು. ಇದು ಪರಿವರ್ತನೆಯಾಗುವ ವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುವುದು.

ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭಿಸಲಾಗಿದೆ.

ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜತೆ ಸಮನ್ವಯಗೊಳಿಸಿ ಈ ಯೋಜನೆ ಜಾರಿಗೊಳಿಸಲಾಗಿದೆ. ಮೀನುಗಾರಿಕೆ ಉತ್ತೇಜನಕ್ಕೆ ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಆರ್ಟಿಫಿಶೀಯಲ್ ರಿಫ್ ಸ್ಥಾಪನೆ (ಕೃತಕ ಬಂಡೆಗಳ ಮೂಲಕ ) ಮಾಡಲಾಗುವುದು ಎಂದು ಹೇಳಿದ್ದಾರೆ.

ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ, ಇಸ್ರೋ ಅಭಿವೃದ್ದಿಪಡಿಸಿದ ಜಿಪಿಎಸ್ ದೋಣಿಗಳಿಗೆ ಅಳವಡಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

1 day ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

1 day ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

1 day ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

1 day ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

1 day ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

1 day ago