Karnataka Budget 2023 : ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತ 5 ಸಾವಿರ ರೂ.ಗೆ ಹೆಚ್ಚಳ – Vishwanews24
Karnataka Budget 2023 : ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತ 5 ಸಾವಿರ ರೂ.ಗೆ ಹೆಚ್ಚಳ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರುತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.
ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ.
ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ, ದೋಣಿಗಳಿಗೆ ಮೋಟಾರ್ ಇಂಜಿನ್ ಅಳವಡಿಕೆ. ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ ನೀಡಲಾಗುವುದು, ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿ ಗ್ರಾ.ಪಂಗೆ10 ಲಕ್ಷ ರೂ. ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೇಕಾರ ಸಮ್ಮಾನ್ ಯೋಜನೆಯಡಿ ಸಹಾಯಧನ ಮೊತ್ತವನ್ನು 3 ಸಾವಿರ ರೂ.ನಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.
