ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ. ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ್ದಾರೆ.
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್ ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೊಷಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.
ಮಾನ್ಯತೆ ಪತ್ರಕರ್ತರಿಗೆ 5 ಲಕ್ಷ ದವರೆಗೆ ಉಚಿತ ಚಿಕಿತ್ಸೆ. ಪತ್ರಕರ್ತರ ಮಾಸಾಶನ 12 ರಿಂದ 15 ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಿವೃತ್ತ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಮತ್ತು ಅವಲಂಬಿತರಿಗೆ 6ಸಾವಿರದಿಂದ 7500ಕ್ಕೆ ಹೆಚ್ಚಳ ಮಾಡಿರುವುದಕ್ಕೂ ಧನ್ಯವಾದ ತಿಳಿಸಿದ್ದಾರೆ.
ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿಟ್ಟಿನಲ್ಲಿ ಬೇಡಿಕೆ ಈಡೇರಿಸಲು ಸಹಕರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೂ ತಗಡೂರು ಧನ್ಯವಾದ ತಿಳಿಸಿದ್ದಾರೆ.
ಯೋಜನೆ ವಿಸ್ತರಿಸಲಿ: ಆರೋಗ್ಯ ಯೋಜನೆಯನ್ನು ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಮಾಡದೆ, ಮುಂದೆ ಎಲ್ಲಾ ಪತ್ರಕರ್ತರಿಗೆ ವಿಸ್ತರಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…