ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದಾರೆ. ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ ಘೋಷಿಸಿದ್ದಾರೆ.
ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯಂತೆ ಬಜೆಟ್ ನಲ್ಲಿ ಪತ್ರಕರ್ತರಿಗೆ ಮುಖ್ಯಮಂತ್ರಿ ಮಾಧ್ಯಮ ಸಂಜೀವಿನಿ ಆರೋಗ್ಯ ಯೋಜನೆ ಘೊಷಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಧನ್ಯವಾದ ತಿಳಿಸಿದ್ದಾರೆ.
ಮಾನ್ಯತೆ ಪತ್ರಕರ್ತರಿಗೆ 5 ಲಕ್ಷ ದವರೆಗೆ ಉಚಿತ ಚಿಕಿತ್ಸೆ. ಪತ್ರಕರ್ತರ ಮಾಸಾಶನ 12 ರಿಂದ 15 ಸಾವಿರಕ್ಕೆ ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇದೇ ಸಂದರ್ಭದಲ್ಲಿ ನಿವೃತ್ತ ಪತ್ರಕರ್ತರ ಮಾಸಾಶನವನ್ನು 12 ಸಾವಿರದಿಂದ 15 ಸಾವಿರಕ್ಕೆ ಮತ್ತು ಅವಲಂಬಿತರಿಗೆ 6ಸಾವಿರದಿಂದ 7500ಕ್ಕೆ ಹೆಚ್ಚಳ ಮಾಡಿರುವುದಕ್ಕೂ ಧನ್ಯವಾದ ತಿಳಿಸಿದ್ದಾರೆ.
ಸಂಘದ ಹಕ್ಕೊತ್ತಾಯಕ್ಕೆ ಸ್ಪಂದಿಸಿ ಈ ನಿಟ್ಟಿನಲ್ಲಿ ಬೇಡಿಕೆ ಈಡೇರಿಸಲು ಸಹಕರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾದ ಕೆ.ವಿ.ಪ್ರಭಾಕರ್ ಮತ್ತು ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರಿಗೂ ತಗಡೂರು ಧನ್ಯವಾದ ತಿಳಿಸಿದ್ದಾರೆ.
ಯೋಜನೆ ವಿಸ್ತರಿಸಲಿ: ಆರೋಗ್ಯ ಯೋಜನೆಯನ್ನು ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾತ್ರ ಸೀಮಿತ ಮಾಡದೆ, ಮುಂದೆ ಎಲ್ಲಾ ಪತ್ರಕರ್ತರಿಗೆ ವಿಸ್ತರಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರು ಒತ್ತಾಯಿಸಿದ್ದಾರೆ.
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…