ಬೆಂಗಳೂರು: ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಆಯವ್ಯಯ ಮಂಡಿಸುತ್ತಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸಕ್ತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮ ವಹಿಸಲಾಗುವುದು. ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸಕ್ತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು ಎಂದವರು ತಿಳಿಸಿದರು.
ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಿಸಿದರು.
ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು. ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು ‘ಮಲ್ಟಿ-ಲೆವೆಲ್ ಪಾರ್ಕಿಂಗ್’ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…