Featured

Karnataka Budget 2025 :1.81 ಲಕ್ಷ ರೈತರಿಗೆ 440 ಕೋಟಿ ಸಹಾಯಧನ ; ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?  ಇಲ್ಲಿದೆ ಮಾಹಿತಿ – vishwanews24

Karnataka Budget 2025 : 1.81 ಲಕ್ಷ ರೈತರಿಗೆ 440 ಕೋಟಿ ಸಹಾಯಧನ

ಹನಿ, ತುಂತುರು ನೀರಾವರಿ ಘಟಕ ಅಳವಡಿಕೆ ಯೋಜನೆ

ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪನೆ

ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?  ಇಲ್ಲಿದೆ ಮಾಹಿತಿ

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಈ ಬಾರಿ ಕೃಷಿ ಕ್ಷೇತ್ರಕ್ಕೂ ಬಂಪರ್‌ ಕೊಡುಗೆಗಳನ್ನ ಘೋಷಣೆ ಮಾಡಿದ್ದಾರೆ.

ಹನಿ ಮತ್ತು ತುಂತುರು ನೀರಾವರಿ ( ಘಟಕ ಅಳವಡಿಕೆಗೆ ಕೃಷಿ ಇಲಾಖೆಯಿಂದ ಒಟ್ಟು 1.81 ಲಕ್ಷ ರೈತರಿಗೆ 440 ಕೋಟಿ ರೂ. ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕೃಷಿ ಕ್ಷೇತ್ರಕ್ಕೆ ಹೊಸ ಘೋಷಣೆಗಳೇನು?
* ರೈತ ಸಮೃದ್ಧಿ ಯೋಜನೆಯಡಿ 10 ಕೃಷಿ ಹವಾಮಾನ ವಲಯಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳ ಅಭಿವೃದ್ಧಿ ಮಾಡಲಾಗುವುದು.
* ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 428 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ರೈತರಿಗೆ ಸಹಾಯಧನ ಸೌಲಭ್ಯ ಕಲ್ಪಿಸುವುದು.
* ತೊಗರಿ ಉತ್ಪಾದನೆ ಉತ್ತೇಜನಕ್ಕೆ 88 ಕೋಟಿ ರೂ. ಒದಗಿಸಲಾಗುವುದು.
* ರಾಜ್ಯದಲ್ಲಿ 6,000 ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ ಮಾಡಲಾಗುವುದು.
* ಕೃಷಿ ಭಾಗ್ಯ ಯೋಜನೆಯಡಿ 12 ಸಾವಿರ ಕೃಷಿ ಹೊಂಡ ನಿರ್ಮಾಣ ಗುರಿ ಹೊಂದಲಾಗಿದೆ.
* ಬೆಳೆಗಳ ಕುರಿತು ನಿಖರ ತೀರ್ಮಾನ ಕೈಗೊಳ್ಳಲು ನೆರವು ನೀಡುವ ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ ಸ್ಥಾಪಿಸಲಾಗುವುದು.
* ಕೃಷಿ ಹವಾಮಾನ ವಲಯಗಳ ವರ್ಗೀಕರಣವನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ ಮಾಡಲಾಗುವುದು.
* ರೈತರ ಜೀವನೋಪಾಯ ಸುಧಾರಣೆಗೆ ಸಮಗ್ರ ಮಳೆಯಾಶ್ರಿತ ಕೃಷಿ ನೀತಿ ಜಾರಿ.
* ಕೃಷಿ ಇಲಾಖೆಯ 58 ಪ್ರಯೋಗಾಲಯಗಳ ಬಲವರ್ಧನೆ.

 

* 20 ಕೋಟಿ ರೂ. ವೆಚ್ಚದಲ್ಲಿ ಸಾವಯವ ಮತ್ತು ಸಿರಿಧಾನ್ಯ ಹಬ್‌ಗಳ ಸ್ಥಾಪನೆ ಮಾಡುವುದರ ಜೊತೆಗೆ ಉತ್ತರ ಕನ್ನಡ ಜಿಲ್ಲೆ, ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕಾಗಿ ಪರಿವರ್ತಿಸಲು ಕ್ರಮ.
* ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮೂಲಸೌಕರ್ಯ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ಮೀಸಲಿಡಲಾಗುವುದು
* ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ ಸೌಲಭ್ಯ ಕಲ್ಪಿಸಲಾಗುವುದು
* ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು
* ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಕುರಿತು ಕಾರ್ಯಸಾಧ್ಯತ ವರದಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು.

Vishwa News 24

Recent Posts

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

59 minutes ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

3 hours ago

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ  ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…

3 hours ago

ಉಡುಪಿ : ವ್ಯಕ್ತಿ ನಾಪತ್ತೆ -vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…

19 hours ago