ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸೆ ಸೇವೆಗಳನ್ನು ಒದಗಿಸಲು 35 ಕೋಟಿ ರೂ ಗಳ ಕಾರ್ಪಸ್ ಫಂಡ್ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.
ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರ ಅನುದಾನ ನೀಡಲಾಗುವುದು ಎಂದರು.
ಸಮಾಜಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ ಹೆಚ್ಚಳ ಮಾಡಲಾಗುವುದು ಎಂದರು.
ಕ್ರೈಸ್ಟ್ ಅಡಿಯಲ್ಲಿ 638 ಕೋಟಿ ರೂಗಳ ಅಂದಾಡು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಮಾಡಲಾಗುತ್ತದೆ. 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಎಂದರು.
18 ವಿದ್ಯಾರ್ಥಿನಿಗಳಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತದೆ. 31 ಹೊಸ ಮೆಟ್ರಿಕ್ ನಂತರ ವಸತಿ ನಿಲಯ ಮಂಜೂರು ಮಾಡಲಾಗುವುದು ಎಂದರು.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…