ಮಂಡ್ಯ : ಗಣಿಗಾರಿಕೆಯ ವಿರುದ್ಧ ಸಮರ ಸಾರಿರುವ ಮಂಡ್ಯ ಜಿಲ್ಲಾಢಳಿತ, ಬೇಬಿ ಬೆಟ್ಟ ಸೇರಿದಂತೆ ಕೆ ಆರ್ ಎಸ್ ಸುತ್ತಾಮುತ್ತಾ ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಡ್ಯಾಂ ಸುರಕ್ಷತಾ ದೃಷ್ಟಿಯಿಂದ ಆಗಸ್ಟ್ 28ರಿಂದ 144 ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಈ ಮೂಲಕ ಬೇಬಿ ಬೆಟ್ಟ ಸೇರಿದಂತೆ KRS ಸುತ್ತಮುತ್ತ ಗಣಿಗಾರಿಕೆ ಸಂಪೂರ್ಣ ಬಂದ್ ಮಾಡಲಾಗಿದೆ.
ಹೀಗಾಗಿ KRS ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಅನಿರ್ಧಿಷ್ಟಾವಧಿಗೆ ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದೆ. ಈ ಮೂಲಕ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟ, ಚಿನಕುರುಳಿ, ಹೊನಗಾನಹಳ್ಳಿ, ದೊಡ್ಡಭೋಗನಹಳ್ಳಿ, ಮೊಳೆಸಂದ್ರ, ಅಲ್ಪಳ್ಳಿ, ಕಟ್ಟೇರಿ, ಕಣಿವೆಕೊಪ್ಪಲು, ಚಂದ್ರೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್, KRS ಡ್ಯಾಮ್ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಶಬ್ದ ಕೇಳಿಬಂದಿತ್ತು. ಈ ಶಬ್ದಕ್ಕೆ ಗಣಿಗಾರಿಕೆ ಕಲ್ಲು ಗಣಿಗಾರಿಕೆ ಕಾರಣ ಇರಬಹುದು ಎಂದ ಹಿರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ, ತಹಸೀಲ್ದಾರ್ ಅಭಿಪ್ರಾಯಿಸಿದ್ದಾರೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…