Featured

‘KSRTC’ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರ ವಿತರಣೆ – vishwanews24

‘KSRTC’ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರ ವಿತರಣೆ

ಬೆಂಗಳೂರು: ದೇಶದಲ್ಲೇ ಪ್ರಥಮ ಎನ್ನುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಪಘಾತದಲ್ಲಿ ಮೃತರಾಗುವಂತ ನೌಕರರಿಗೆ 1 ಕೋಟಿ ವಿಮಾ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಅಪಘಾತದಲ್ಲಿ ಮೃತಪಟ್ಟಂತ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರವನ್ನು ವಿತರಿಸಲಾಗಿದೆ.

ಇದಲ್ಲದೇ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತಪಟ್ಟಂತ 23 ಮಂದಿ ನೌಕರರ ಅವಲಂಭಿತರಿಗೆ ತಲಾ 10 ಲಕ್ಷ ಪರಿಹಾರ ನೀಡಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ವಿಮಾ ಪರಿಹಾರ ವಿತರಣೆ ಬಳಿಕ ಮಾತನಾಡಿದಂತ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು, ನಿಗಮದ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು, ಅದನ್ನು ಮರಳಿ ತರಲಾಗುವುದಿಲ್ಲ. ಆದರೆ ಅವರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ನಿಗಮವು ರೂಪಿಸಿರುವ ಯೋಜನೆ ದೂರದೃಷ್ಠಿಯನ್ನು ಹೊಂದಿರುವುದಾಗಿ ತಿಳಿಸಿದರು. ಈ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ ಮನೆ ಕಟ್ಟಿಕೊಳ್ಳಲು ಉಪಯೋಗಿಸಿಕೊಳ್ಳಿ , ಬೇರೆ ಇತರೆ ಎಲ್ಲೂ ಹಣ ಪೋಲು ಮಾಡದಂತೆ ಎಚ್ಚರವಹಿಸಲು ತಿಳಿಸಿದರು.

ನಿಗಮವು ಯಶಸ್ವಿಯಾಗಿ ಶಕ್ತಿ ಯೋಜನೆ ಅನುಷ್ಠಾನಗೊಳಿಸಲು ಮುಖ್ಯ ಪಾತ್ರ ವಹಿಸಿರುವ ನಿಗಮದ ಚಾಲಕರು,ನಿರ್ವಾಹಕರು, ಸಿಬ್ಬಂದಿಗಳು, ಅಧಿಕಾರಿಗಳು ಹಾಗೂ ಕಾರ್ಮಿಕ ಮುಖಂಡರುಗಳ ಪಾತ್ರ ಅಭಿನಂದನೀಯ ಎಂದು ತಿಳಿಸಿದರು. ನಿಗಮದ ವಿದ್ಯಾ ಚೇತನ ವಿದಾರ್ಥಿ ವೇತನ ಯೋಜನೆಯ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.

ಕೆ ಎಸ್ ಆರ್ ಟಿಸಿ ಅಧ್ಯಕ್ಷ ಶ್ರೀನಿವಾಸ್ ಗುಬ್ಬಿ ಅವರು ಮಾತನಾಡಿ ನಿಗಮದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಶ್ರಮ ಜೀವಿಗಳಾಗಿದ್ದು ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಾಗಿರುತ್ತದೆ. ಇಂದು ವಿತರಿಸಲಾಗಿರುವ ಪರಿಹಾರ ಮೊತ್ತವನ್ನು ಕುಟುಂಬ ವರ್ಗದವರು ಸಮರ್ಪಕವಾಗಿ ಬಳಸಿಕೊಂಡು ಕುಟುಂಬದ ಆರ್ಥಿಕ ಸ್ವಾವಲಂಬನೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ತಿಳಿಸಿದರು.

ಸ್ಥಾಪಕ ನಿರ್ದೇಶಕರು, ಕಾರ್ಮಿಕ ಸಂಘಟನೆಗಳ ಮುಖಂಡರುಗಳಾದ ಅನಂತಸುಬ್ಬರಾವ್, ವಿಜಯಭಾಸ್ಕರ್, ರೇವಪ್ಪ, ಮಂಜುನಾಥ್, ಚಂದ್ರಶೇಖರ್, ನಾಗರಾಜು, ವೆಂಕಟರಮಣಪ್ಪ, ಜಯರಾಜ ಅರಸು ಇತರರು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago