Featured

KSRTC ನೌಕರರ ಮುಷ್ಕರ:ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ : ಸಿದ್ದರಾಮಯ್ಯ -Vishwanews24

KSRTC ನೌಕರರ ಮುಷ್ಕರ:ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ : ಸಿದ್ದರಾಮಯ್ಯ

ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆ ..

ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ..

ನವದೆಹಲಿ: ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಹಿಂದಿನ ಮುಷ್ಕರದ ಸಂದರ್ಭದಲ್ಲಿ ನೌಕರರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರವು ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ’ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌ಗೆ ಎಲ್ಲ ಸಮಾಜದವರೂ ಬೇಕು , ಬಿಜೆಪಿಯವರಂತೆ ನಾವು ಯಾರನ್ನೂ ಬೇರೆಯಾಗಿ ನೋಡುವುದಿಲ್ಲ : ಡಿ.ಕೆ. ಶಿ -Vishwanews24

‘ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣವು ಸ್ವಯಂಕೃತ ಅಪರಾಧವಾಗಿದೆ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ’ ಎಂದು ಅವರು ಟ್ವೀಟಿಸಿದ್ದಾರೆ.

‘ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು. ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

‘ಆಂತರಿಕ ತಿಕ್ಕಾಟ,‌ ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ‌ ಮತದಾರರು ನೀಡಲಿದ್ದಾರೆ’ ಎಂದೂ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

1 hour ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago