ನವದೆಹಲಿ: ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಹಿಂದಿನ ಮುಷ್ಕರದ ಸಂದರ್ಭದಲ್ಲಿ ನೌಕರರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಬೇಕಿತ್ತು. ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರವು ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ’ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
‘ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟದ ಕಾರಣವು ಸ್ವಯಂಕೃತ ಅಪರಾಧವಾಗಿದೆ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ’ ಎಂದು ಅವರು ಟ್ವೀಟಿಸಿದ್ದಾರೆ.
‘ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್ಆರ್ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಬೇಕು. ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
‘ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ನೀಡಲಿದ್ದಾರೆ’ ಎಂದೂ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.
ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…