Featured

KSRTC ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ , ಜೋರಾಗಿ ಹಾಡು ಹಾಕುವಂತಿಲ್ಲ : ಹೊಸ ನಿಯಮ  ಜಾರಿಗೆ  – Vishwanews24

KSRTC ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ , ಜೋರಾಗಿ ಹಾಡು ಹಾಕುವಂತಿಲ್ಲ : ಹೊಸ ನಿಯಮ  ಜಾರಿಗೆ  – Vishwanews24

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಫೋನ್ ಸ್ಪೀಕರ್‌ಗಳಲ್ಲಿ ಜೋರಾಗಿ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ.

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.

ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು.

ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಇದು ಕಾನೂನು ಬಾಹಿರವಾಗಿರುವುದರಿಂದ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

ಬಸ್ ಡ್ರೈವರ್‌ಗಳಿಂದ ಸ್ಥಳದಲ್ಲಿಯೇ ದಂಡ ವಸೂಲಿ ಮಾಡಲು ಪೊಲೀಸರು ಮುಂದಾಗುತ್ತಾರೆ ಆದರೆ ಆ ಸಮಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಅಥವಾ ಚಾಲಕರ ಬಳಿ ದುಡ್ಡು ಇಲ್ಲದೆ ಇರಬಹುದು. ಹೀಗಾಗಿ, ನೇರವಾಗಿ ಸಂಸ್ಥೆಗೆ ಕಳುಹಿಸಲಾಗುವುದು ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಚಾಲಕರು ನಿರ್ಲಕ್ಷ್ಯ ಚಾಲನೆ ಮಾಡುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಕರ್ಕಶ ಶಬ್ದ ಮಾಡುವುದು, ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಡುವುದರಲ್ಲೂ ಮುಂದಿವೆ. ಬೆಂಗಳೂರಿನ ಬಹುತೇಕ ಸಿಗ್ನಲ್‌ಗಳಲ್ಲಿ ಸಂಚಾರ ಪೊಲೀಸರು ಸ್ವಯಂ ಚಾಲಿತ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಸ್ವಯಂ ಚಾಲಿತ ಕ್ಯಾಮರಾಗಳು ಸಾಕ್ಷಿ ಸಮೇತ ಸೆರೆ ಹಿಡಿಯುತ್ತವೆ. ಇದನ್ನು ಆಧರಿಸಿ ಸಂಚಾರ ಪೊಲೀಸರು ದಂಡವನ್ನು ವಿಧಿಸುತ್ತಾರೆ. ಇದರ ಜತೆಗೆ ಸಿಗ್ನಲ್ ಗಳಲ್ಲಿಕಾರ್ಯ ನಿರ್ವಹಿಸುವ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಬಗ್ಗೆ ಮೊಬೈಲ್‌ನಲ್ಲಿ ಚಿತ್ರ ತೆಗೆದುಕೊಂಡು ಕೇಸು ದಾಖಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡುವ ವಾಹನಗಳ ವಿರುದ್ಧ ಸದ್ದಿಲ್ಲದೇ ಕೇಸುಗಳು ಬೀಳುತ್ತಿವೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

32 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

3 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

4 hours ago