Featured

KSRTC ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ , ಜೋರಾಗಿ ಹಾಡು ಹಾಕುವಂತಿಲ್ಲ : ಹೊಸ ನಿಯಮ  ಜಾರಿಗೆ  – Vishwanews24

KSRTC ಬಸ್ ಪ್ರಯಾಣದ ವೇಳೆ ಪ್ರಯಾಣಿಕರು ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ , ಜೋರಾಗಿ ಹಾಡು ಹಾಕುವಂತಿಲ್ಲ : ಹೊಸ ನಿಯಮ  ಜಾರಿಗೆ  – Vishwanews24

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಮೊಬೈಲ್ ಫೋನ್ ಸ್ಪೀಕರ್‌ಗಳಲ್ಲಿ ಜೋರಾಗಿ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ.

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ.

ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು.

ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಇದು ಕಾನೂನು ಬಾಹಿರವಾಗಿರುವುದರಿಂದ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

ಬಸ್ ಡ್ರೈವರ್‌ಗಳಿಂದ ಸ್ಥಳದಲ್ಲಿಯೇ ದಂಡ ವಸೂಲಿ ಮಾಡಲು ಪೊಲೀಸರು ಮುಂದಾಗುತ್ತಾರೆ ಆದರೆ ಆ ಸಮಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಅಥವಾ ಚಾಲಕರ ಬಳಿ ದುಡ್ಡು ಇಲ್ಲದೆ ಇರಬಹುದು. ಹೀಗಾಗಿ, ನೇರವಾಗಿ ಸಂಸ್ಥೆಗೆ ಕಳುಹಿಸಲಾಗುವುದು ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಚಾಲಕರು ನಿರ್ಲಕ್ಷ್ಯ ಚಾಲನೆ ಮಾಡುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಕರ್ಕಶ ಶಬ್ದ ಮಾಡುವುದು, ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಡುವುದರಲ್ಲೂ ಮುಂದಿವೆ. ಬೆಂಗಳೂರಿನ ಬಹುತೇಕ ಸಿಗ್ನಲ್‌ಗಳಲ್ಲಿ ಸಂಚಾರ ಪೊಲೀಸರು ಸ್ವಯಂ ಚಾಲಿತ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಸ್ವಯಂ ಚಾಲಿತ ಕ್ಯಾಮರಾಗಳು ಸಾಕ್ಷಿ ಸಮೇತ ಸೆರೆ ಹಿಡಿಯುತ್ತವೆ. ಇದನ್ನು ಆಧರಿಸಿ ಸಂಚಾರ ಪೊಲೀಸರು ದಂಡವನ್ನು ವಿಧಿಸುತ್ತಾರೆ. ಇದರ ಜತೆಗೆ ಸಿಗ್ನಲ್ ಗಳಲ್ಲಿಕಾರ್ಯ ನಿರ್ವಹಿಸುವ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಬಗ್ಗೆ ಮೊಬೈಲ್‌ನಲ್ಲಿ ಚಿತ್ರ ತೆಗೆದುಕೊಂಡು ಕೇಸು ದಾಖಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡುವ ವಾಹನಗಳ ವಿರುದ್ಧ ಸದ್ದಿಲ್ಲದೇ ಕೇಸುಗಳು ಬೀಳುತ್ತಿವೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

7 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

7 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

8 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

9 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

9 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

10 hours ago