Featured

KSRTC ಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್‌ ಚಾರ್ಜಿಂಗ್‌, ಟಿವಿ, ಹವಾನಿಯಂತ್ರಿತ ವ್ಯವಸ್ಥೆ – Vishwanews24

ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಚಾಲನೆ : ಮೊಬೈಲ್‌ ಚಾರ್ಜಿಂಗ್‌, ಟಿವಿ, ಹವಾನಿಯಂತ್ರಿತ ವ್ಯವಸ್ಥೆ

ಬೆಂಗಳೂರು: ಇಂದು ಕೆಎಸ್‌ಆರ್‌ಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು. ಬೆಂಗಳೂರಿನಿಂದ  ರಾಮನಗರಕ್ಕೆ  ಈ ಬಸ್‌ ಸಂಚಾರ ಮಾಡುತ್ತೆ.

ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಿಂದ EV ಪವರ್ ಪ್ಲಸ್ ಹೊರಟಿತ್ತು. ಮೇಕ್ ಇನ್ ಇಂಡಿಯಾ ವಿದ್ಯುತ್ ಬಸ್ ಫೇಮ್-2 ಯೋಜನೆಯಡಿ 50 ಅಂತರ ನಗರ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಚರಣೆಗೊಳಿಸಿದೆ.

ಓಲೆಕ್ಟಾ ಕಂಪನಿಯು ಈ ಬಸ್‌ನ್ನು ನಿಯೋಜನೆ‌ ಮಾಡಿದೆ. ದೇಶದ ಮೊದಲನೇ ಅಂತರ ನಗರ ಇಲೆಕ್ಟ್ರಿಕ್ ವಾಹನ ಇದಾಗಿದೆ. ಡಿಸೆಂಬರ್ 31ರಂದು ಈ ಬಸ್‌ನ್ನು ಸಾರಿಗೆ ಸಚಿವ ಶ್ರೀರಾಮುಲು ಲೋಕಾರ್ಪಣೆ‌ ಮಾಡಿದ್ದರು. ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು KSRTC ಹೆಸರಿಟ್ಟಿದೆ.

 

KSRTC EV ಪವರ್ ಪ್ಲಸ್ ವಿಶೇಷತೆ ಏನು?

1. ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ
2. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ
3. ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ
4. ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್
5. ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್
6. ಮನರಂಜನೆಗಾಗಿ ಬಸ್ ನಲ್ಲಿ ಎರಡು ಟಿವಿ ಅಳವಡಿಕೆ
7. ಬಸ್ ನಲ್ಲಿ 43 + 2 ಸೀಟಿಂಗ್ ಕೆಪಾಸಿಟಿಯಿದೆ
8. ಬಸ್ ಸಂಪೂರ್ಣ ಸೆನ್ಸಾರ್ ಹಿಡಿತದಲ್ಲಿ ಇರಲಿದೆ
9. ಫ್ರಂಟ್ ಲಾಗ್ & ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ
10. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್

ಕೆಎಸ್‌ಆರ್‌ಟಿಸಿ ಎಂಡಿ‌ ಅನ್ಬುಕುಮಾರ್ ಮಾತನಾಡಿ, ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ ಮಾಡುತ್ತದೆ. ಮೊದಲ ಬಸ್ ಇಂದು ಟ್ರಾಯಲ್ ರನ್ ಮಾಡಲಾಗುತ್ತೆ. ಬೆಂಗಳೂರಿನಿಂದ ದಾವಣಗೆರೆವರೆಗೂ ಪ್ರಯೋಗಿಕವಾಗಿ ಸಂಚಾರ ಮಾಡುತ್ತೆ. ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗುತ್ತೆ. ಬೆಂಗಳೂರು-ಮೈಸೂರು ಬಸ್ ಸಂಚಾರ ಆರಂಭವಾಗುತ್ತೆ. ಈ ತಿಂಗಳ‌‌ ಕೊನೆಯಲ್ಲಿ ಇನ್ನಷ್ಟು ಕಡೆ ಬಸ್ ಬಿಡಲಾಗುತ್ತೆ. ಮೈಸೂರು-ಬೆಂಗಳೂರಿಗೆ 300 ರೂಪಾಯಿ‌‌ ದರ‌ ನಿಗದಿ‌ ಮಾಡಿದ್ದೇವೆ. ಗುತ್ತಿಗೆ ಆಧಾರದಲ್ಲಿ ಎಲೆಕ್ಟ್ರಿಕ್ ಬಸ್ ಖರೀದಿ‌‌ ಮಾಡಲಾಗಿದೆ. ರಾಜ್ಯದ 6 ಕಡೆ ಚಾರ್ಜಿಂಗ್ ಪಾಯಿಂಟ್ ಮಾಡಲಾಗುತ್ತೆ ಎಂದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago