Featured

KSRTC ಸಾರಿಗೆ ನೌಕರರ ಮುಷ್ಕರ : ಉಡುಪಿಯಲ್ಲಿ ರಸ್ತೆಗಿಳಿಯ ದ ಹಲವಾರು ಬಸ್‌ಗಳು , ಕೆಲವು ಬಸ್‌ಗಳ ಸಂಚಾರ -Vishwanews24

ಕೆ ಎಸ್ ‌ಆರ್ ‌ಟಿ ಸಿ ಸಾರಿಗೆ ನೌಕರರ ಮುಷ್ಕರ : ಉಡುಪಿಯಲ್ಲಿ ರಸ್ತೆಗಿಳಿಯ ದ ಹಲವಾರು ಬಸ್‌ಗಳು , ಕೆಲವು ಬಸ್‌ಗಳ ಸಂಚಾರ -Vishwanews24

ಉಡುಪಿ,  : ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸಿದ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಯ ಹಲವಾರು ಬಸ್‌ಗಳು ಸೋಮವಾರ ಡಿಸೆಂಬರ್ 14 ರಂದು ಜಿಲ್ಲೆಯಲ್ಲಿ ರಸ್ತೆಗಿಳಿಯದೆ ಇದ್ದುದರಿಂದ ಬೆಳಿಗ್ಗೆಯಿಂದ ಕೇವಲ ಎರಡು ಬಸ್ಸುಗಳು ಉಡುಪಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಟಿದೆ. ಒಂದು ಕಾರ್ಕಳ ಕಡೆಗೆ ಮತ್ತೊಂದು ಬಸ್‌ ಧರ್ಮಸ್ಥಳಕ್ಕೆ ತೆರಳಿದವು.

ಇಲ್ಲಿನ ಅಧಿಕಾರಿಗಳು ಶೀಘ್ರದಲ್ಲೇ ಸೇವೆಗಳನ್ನು ಪ್ರಾರಂಭಿಸುವ ಆಶಯದಲ್ಲಿದ್ದಾರೆ. ಮುಷ್ಕರದಿಂದಾಗಿ ಕಳೆದ ಕೆಲವು ದಿನಗಳಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಡಿಮೆಯಿದ್ದರು. ಆದರೆ ಅನೇಕ ಪ್ರಯಾಣಿಕರು ಸಹ ಬಸ್ ನಿಲ್ದಾಣದಲ್ಲಿದ್ದಾರೆ.

ಖಾಸಗಿ ಬಸ್ ನಿರ್ವಾಹಕರು ಪ್ರಯಾಣಿಕರಿಗಾಗಿ ವಿಶೇಷ ಸೇವೆಯನ್ನು ಪ್ರಾರಂಭಿಸುತ್ತಿದ್ದಾರೆ. ಇತರ ದಿನಗಳಿಗೆ ಹೋಲಿಸಿದರೆ ಈ ಖಾಸಗಿ ಬಸ್‌ನ ವಿಶೇಷ ಸೇವೆಗಳ ಪ್ರಯಾಣ ದರವು ಅಧಿಕವಾಗಿದೆ.

ರವಿವಾರ, ಉಡುಪಿ ಜಿಲ್ಲೆಯಲ್ಲಿ ಭಾಗಶಃ ಮುಷ್ಕರದ ಪರಿಣಾಮ ಬೀರಿದೆ. ಉಡುಪಿ ಮತ್ತು ಕುಂದಾಪುರ ಡಿಪೋಗಳಿಂದ ಬಸ್‌ಗಳು ಇತರ ಜಿಲ್ಲೆಗಳಿಗೆ ತೆರಳಿದ್ದರೂ ಸಹ, ಬೇರೆ ಜಿಲ್ಲೆಗಳಿಂದ ಬರುವ ಬಸ್‌ಗಳ ಸಂಖ್ಯೆ ತೀರಾ ಕಡಿಮೆಯಾಗಿತ್ತು.

ಮಂಗಳೂರಿನಲ್ಲಿ ರವಿವಾರ ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದವು. ಇದರಿಂದಾಗಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು.

ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಂತಹ ದೂರದ ಸ್ಥಳಗಳಿಂದ ಬಂದ ಬಸ್‌ಗಳ ಸಂಖ್ಯೆ ತೀರಾ ಕಡಿಮೆ ಇದ್ದುದರಿಂದ, ಇತರ ಜಿಲ್ಲೆಗಳಿಗೆ ಪ್ರಯಾಣಿಸಲು ಕೆಲವೇ ಬಸ್‌ಗಳು ಮಾತ್ರ ಇಂದು ಲಭ್ಯವಿವೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಸೇವೆಗಳನ್ನು ನಡೆಸಲಾಯಿತು.

ಬಸ್‌ಗಳ ಲಭ್ಯತೆಯ ಬಗ್ಗೆ ಖಾತರಿ ಇಲ್ಲದ ಕಾರಣ ಹಲವಾರು ಪ್ರಯಾಣಿಕರು ತಮ್ಮ ಬುಕಿಂಗ್ ಅನ್ನು ರದ್ದುಪಡಿಸಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago