ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ಜೊತೆಗೆ 14 ರಾಜ್ಯಗಳ 48 ವಿಧಾನಸಭಾ ಮತ್ತು 2 ಲೋಕಸಭಾ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಗ್ಗೆ ಎಂಟು ಗಂಟೆಗೆ ಆರಂಭಗೊಂಡಿದೆ.ಮಹಾರಾಷ್ಟ್ರದ 288 ಅಸೆಂಬ್ಲಿ ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ನಡುವೆ ಪ್ರಮುಖ ಸ್ಪರ್ಧೆ ಏರ್ಪಟ್ಟಿತ್ತು.
ಆದರೆ ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಬೆಳಗ್ಗೆಯೇ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡಿದೆ.
ಮಹಾರಾಷ್ಟ್ರ ವಿಧಾನಸಭೆಯ 288 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಗಳ ಎಣಿಕೆಯಲ್ಲಿ ಬೆಳಗ್ಗೆ 9:50ರ ಸುಮಾರಿಗೆ ಬಿಜೆಪಿ ನೇತೃತ್ವದ ಮಹಾಯುತಿ 150 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ 120 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದು ಬೆಳಗಿನ ಟ್ರೆಂಡ್ ಆದರೂ ಸಹ ಮುಂದಿನ ಹಂತಗಳಲ್ಲಿ ಈ ನಂಬರ್ಗಳಲ್ಲಿ ಏರಿಳಿತ ಆಗುವ ಸಾಧ್ಯತೆ ಇದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…