Featured

Mangaluru: ಅಡ್ಯಾರ್‌ ಬೊಂಡ ಫ್ಯಾಕ್ಟರಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ – Vishwanews24

Mangaluru: ಅಡ್ಯಾರ್‌ ಬೊಂಡ ಫ್ಯಾಕ್ಟರಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ

ಮಂಗಳೂರು  :ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.

ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ. ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Vishwa News 24

Recent Posts

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

10 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

27 minutes ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

36 minutes ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

43 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

59 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

1 hour ago