ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML)ಸ್ವಾಗತಿಸಿದೆ.
ಪಿಎಫ್ಐ ಚಟುವಟಿಕೆಗಳನ್ನು ಖಂಡಿಸಿದ ಮುಸ್ಲಿಂ ಲೀಗ್ನ ಹಿರಿಯ ನಾಯಕ ಎಂ.ಕೆ.ಮುನೀರ್(MK Muneer), ಈ ಸಂಘಟನೆಯೂ ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ ಮತ್ತು ಹಿಂಸಾಚಾರದ ಮಾರ್ಗವನ್ನು ಅಳವಡಿಸಿಕೊಳ್ಳಲು ಸಮುದಾಯದವರನ್ನು ಮನವೊಲಿಸಿತ್ತು ಎಂದು ಹೇಳಿದರು.
ಕೋಝಿಕ್ಕೋಡ್ನಲ್ಲಿ ಪ್ರತಿಕ್ರಿಯಿಸಿದ ಅವರು, ಪಿಎಫ್ಐ ಯುವ ಪೀಳಿಗೆಯನ್ನು ದಾರಿತಪ್ಪಿಸಲು ಪ್ರಯತ್ನಿಸಿದ್ದು ಮಾತ್ರವಲ್ಲದೆ ಸಮಾಜದಲ್ಲಿ ಒಡಕು ಮತ್ತು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸಿತ್ತು ಎಂದು ಕಿಡಿಕಾರಿದರು.
ರಾಜ್ಯದಲ್ಲಿರುವ ಎಲ್ಲಾ ಇಸ್ಲಾಮಿಕ್ ವಿದ್ವಾಂಸರು ಉಗ್ರಗಾಮಿ ಸಿದ್ಧಾಂತಗಳನ್ನು ಬಲವಾಗಿ ಖಂಡಿಸಿದ್ದಾರೆ. ಆದರೆ ಪಿಎಫ್ಐ ಸಣ್ಣ ಮಕ್ಕಳ ಬಾಯಲ್ಲೂ ಅವಹೇಳನಕಾರಿ ಘೋಷಣೆಗಳನ್ನು ಕೂಗುವಂತೆ ಮಾಡಿತ್ತು. ಯಾವ ಇಸ್ಲಾಂ ಅವರನ್ನು ಹಾಗೆ ಮಾಡಲು ಹೇಳಿದೆ ಎಂದು ಪ್ರಶ್ನಿಸಿದರು.
ಆರ್ಎಸ್ಎಸ್ ಮತ್ತು ಪಿಎಫ್ಐ-ಎಸ್ಡಿಪಿಐ ಎರಡರ ಕಾರ್ಯಗಳನ್ನು ಮುಸ್ಲಿಮ್ ಲೀಗ್ ಯಾವಾಗಲೂ ವಿರೋಧಿಸುತ್ತದೆ ಎಂದು ಹೇಳಿದ ಮುನೀರ್, ಆಯಾ ಸಮುದಾಯಗಳು ಅಂತಹ ಸಂಘಟನೆಗಳ ಕೋಮು ಸಿದ್ಧಾಂತಗಳನ್ನು ತಿರಸ್ಕರಿಸಬೇಕು ಎಂದು ಹೇಳಿದರು.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…