Featured

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

ತಿರುವನಂತಪುರಂ: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML)ಸ್ವಾಗತಿಸಿದೆ.

ಪಿಎಫ್‌ಐ ಚಟುವಟಿಕೆಗಳನ್ನು ಖಂಡಿಸಿದ ಮುಸ್ಲಿಂ ಲೀಗ್‌ನ ಹಿರಿಯ ನಾಯಕ ಎಂ.ಕೆ.ಮುನೀರ್(MK Muneer), ಈ ಸಂಘಟನೆಯೂ ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ ಮತ್ತು ಹಿಂಸಾಚಾರದ ಮಾರ್ಗವನ್ನು ಅಳವಡಿಸಿಕೊಳ್ಳಲು ಸಮುದಾಯದವರನ್ನು ಮನವೊಲಿಸಿತ್ತು ಎಂದು ಹೇಳಿದರು.

ಕೋಝಿಕ್ಕೋಡ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಪಿಎಫ್‌ಐ ಯುವ ಪೀಳಿಗೆಯನ್ನು ದಾರಿತಪ್ಪಿಸಲು ಪ್ರಯತ್ನಿಸಿದ್ದು ಮಾತ್ರವಲ್ಲದೆ ಸಮಾಜದಲ್ಲಿ ಒಡಕು ಮತ್ತು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸಿತ್ತು ಎಂದು ಕಿಡಿಕಾರಿದರು.

PFI ನಿಷೇಧ : ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ: ಎಚ್​ಡಿಕೆ – Vishwanews24

ರಾಜ್ಯದಲ್ಲಿರುವ ಎಲ್ಲಾ ಇಸ್ಲಾಮಿಕ್ ವಿದ್ವಾಂಸರು ಉಗ್ರಗಾಮಿ ಸಿದ್ಧಾಂತಗಳನ್ನು ಬಲವಾಗಿ ಖಂಡಿಸಿದ್ದಾರೆ. ಆದರೆ ಪಿಎಫ್‌ಐ ಸಣ್ಣ ಮಕ್ಕಳ ಬಾಯಲ್ಲೂ ಅವಹೇಳನಕಾರಿ ಘೋಷಣೆಗಳನ್ನು ಕೂಗುವಂತೆ ಮಾಡಿತ್ತು. ಯಾವ ಇಸ್ಲಾಂ ಅವರನ್ನು ಹಾಗೆ ಮಾಡಲು ಹೇಳಿದೆ ಎಂದು ಪ್ರಶ್ನಿಸಿದರು.

ಆರ್‌ಎಸ್‌ಎಸ್ ಮತ್ತು ಪಿಎಫ್‌ಐ-ಎಸ್‌ಡಿಪಿಐ ಎರಡರ ಕಾರ್ಯಗಳನ್ನು ಮುಸ್ಲಿಮ್‌ ಲೀಗ್‌ ಯಾವಾಗಲೂ ವಿರೋಧಿಸುತ್ತದೆ ಎಂದು ಹೇಳಿದ ಮುನೀರ್, ಆಯಾ ಸಮುದಾಯಗಳು ಅಂತಹ ಸಂಘಟನೆಗಳ ಕೋಮು ಸಿದ್ಧಾಂತಗಳನ್ನು ತಿರಸ್ಕರಿಸಬೇಕು ಎಂದು ಹೇಳಿದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

4 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

4 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

4 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

19 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

19 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

19 hours ago