ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು(PFI) ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML)ಸ್ವಾಗತಿಸಿದೆ.
ಪಿಎಫ್ಐ ಚಟುವಟಿಕೆಗಳನ್ನು ಖಂಡಿಸಿದ ಮುಸ್ಲಿಂ ಲೀಗ್ನ ಹಿರಿಯ ನಾಯಕ ಎಂ.ಕೆ.ಮುನೀರ್(MK Muneer), ಈ ಸಂಘಟನೆಯೂ ಕುರಾನ್ ಅನ್ನು ತಪ್ಪಾಗಿ ಅರ್ಥೈಸಿದೆ ಮತ್ತು ಹಿಂಸಾಚಾರದ ಮಾರ್ಗವನ್ನು ಅಳವಡಿಸಿಕೊಳ್ಳಲು ಸಮುದಾಯದವರನ್ನು ಮನವೊಲಿಸಿತ್ತು ಎಂದು ಹೇಳಿದರು.
ಕೋಝಿಕ್ಕೋಡ್ನಲ್ಲಿ ಪ್ರತಿಕ್ರಿಯಿಸಿದ ಅವರು, ಪಿಎಫ್ಐ ಯುವ ಪೀಳಿಗೆಯನ್ನು ದಾರಿತಪ್ಪಿಸಲು ಪ್ರಯತ್ನಿಸಿದ್ದು ಮಾತ್ರವಲ್ಲದೆ ಸಮಾಜದಲ್ಲಿ ಒಡಕು ಮತ್ತು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸಿತ್ತು ಎಂದು ಕಿಡಿಕಾರಿದರು.
ರಾಜ್ಯದಲ್ಲಿರುವ ಎಲ್ಲಾ ಇಸ್ಲಾಮಿಕ್ ವಿದ್ವಾಂಸರು ಉಗ್ರಗಾಮಿ ಸಿದ್ಧಾಂತಗಳನ್ನು ಬಲವಾಗಿ ಖಂಡಿಸಿದ್ದಾರೆ. ಆದರೆ ಪಿಎಫ್ಐ ಸಣ್ಣ ಮಕ್ಕಳ ಬಾಯಲ್ಲೂ ಅವಹೇಳನಕಾರಿ ಘೋಷಣೆಗಳನ್ನು ಕೂಗುವಂತೆ ಮಾಡಿತ್ತು. ಯಾವ ಇಸ್ಲಾಂ ಅವರನ್ನು ಹಾಗೆ ಮಾಡಲು ಹೇಳಿದೆ ಎಂದು ಪ್ರಶ್ನಿಸಿದರು.
ಆರ್ಎಸ್ಎಸ್ ಮತ್ತು ಪಿಎಫ್ಐ-ಎಸ್ಡಿಪಿಐ ಎರಡರ ಕಾರ್ಯಗಳನ್ನು ಮುಸ್ಲಿಮ್ ಲೀಗ್ ಯಾವಾಗಲೂ ವಿರೋಧಿಸುತ್ತದೆ ಎಂದು ಹೇಳಿದ ಮುನೀರ್, ಆಯಾ ಸಮುದಾಯಗಳು ಅಂತಹ ಸಂಘಟನೆಗಳ ಕೋಮು ಸಿದ್ಧಾಂತಗಳನ್ನು ತಿರಸ್ಕರಿಸಬೇಕು ಎಂದು ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…