Featured

PFI ನಿಷೇಧ : ನವರಾತ್ರಿ ಸಂದರ್ಭ ದೇಶಕ್ಕೆ ಶುಭಸುದ್ದಿ ;  ನಮ್ಮ ಸಹೋದರ ಪ್ರವೀಣ್ ನೆಟ್ಟಾರು ಮತ್ತು ಹರ್ಷ ಹತ್ಯೆಗೆ ನ್ಯಾಯ ಸಿಕ್ಕಿದೆ : ಯಶ್ ಪಾಲ್ ಸುವರ್ಣ

PFI ನಿಷೇಧ : ನವರಾತ್ರಿ ಸಂದರ್ಭ ದೇಶಕ್ಕೆ ಶುಭಸುದ್ದಿ ;  ನಮ್ಮ ಸಹೋದರ ಪ್ರವೀಣ್ ನೆಟ್ಟಾರು ಮತ್ತು ಹರ್ಷ ಹತ್ಯೆಗೆ ನ್ಯಾಯ ಸಿಕ್ಕಿದೆ

ದೇಶವಿರೋಧಿ ಚಟುವಟಿಕೆಯಲ್ಲಿ ಎಸ್ ಡಿಪಿಐ ಶಾಮೀಲಾಗಿದ್ದರೆ ಕೇಂದ್ರ ಬ್ಯಾನ್ ಮಾಡಲಿದೆ..

ಕಠಿಣ ಕ್ರಮ ಮೋದಿ ಸರಕಾರದಿಂದ ಮಾತ್ರ ಸಾಧ್ಯ..

ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಸತತ ಪ್ರಯತ್ನ ಪಟ್ಟಿದ್ದಾರೆ..

ಎನ್ ಐಎ ಮತ್ತು ಎನ್ ಐ ಎ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ‘ಕಾನೂನು ಬಾಹಿರ ಸಂಘಟನೆ ಬ್ಯಾನ್ ಮಾಡಿದ್ದರಿಂದ ನಮ್ಮ ಸಹೋದರ ಪ್ರವೀಣ್ ನೆಟ್ಟಾರು ಮತ್ತು ಹರ್ಷ ಹತ್ಯೆಗೆ ನ್ಯಾಯ ಸಿಕ್ಕಿದೆ. ಎನ್‌ ಐ ಎ ಕಾರ್ಯಾಚರಣೆಯಿಂದ ಫಲ ಸಿಕ್ಕಿದೆ ಎನ್ನುವುದು ನನ್ನ ಭಾವನೆ. ಇದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಸತತ ಪ್ರಯತ್ನ ಪಟ್ಟಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ” ಹೇಳಿದ್ದಾರೆ.

“ಕಾನೂನು ಬಾಹಿರ ಚಟುವಟಿಕೆ ಮಾಡುವ ಸಂಘಟನೆಗಳನ್ನು ಬ್ಯಾನ್ ಮಾಡಲಾಗಿದೆ. ಪಿಎಫ್ಐ ದೇಶದ ಪರ, ಸಮಾಜದ ಉದ್ಧಾರಕ್ಕೆ ಎಂದೂ ಕೆಲಸ ಮಾಡಿಲ್ಲ. ಗಲಭೆ ಸೃಷ್ಟಿಸೋದೆ ಪಿಎಫ್ ಐ ಕೆಲಸ. ಎಸ್ ಡಿಪಿಐ ಒಂದು ರಾಜಕೀಯ ಪಕ್ಷ. ದೇಶವಿರೋಧಿ ಚಟುವಟಿಕೆಯಲ್ಲಿ ಎಸ್ ಡಿಪಿಐ ಶಾಮೀಲಾಗಿದ್ದರೆ ಕೇಂದ್ರ ಬ್ಯಾನ್ ಮಾಡಲಿದೆ” ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಆರಂಭವಾದ ಹಿಜಾಬ್ ಪ್ರಕರಣ ಕೂಡ PFI ನಿಷೇಧಕ್ಕೆ ಒಂದು ಕಾರಣ : ಶಾಸಕ ರಘುಪತಿ ಭಟ್ – Vishwanews24

ಇದೇ ವೇಳೆ ದೇಶಾದ್ಯಂತ ಕಾರ್ಯಾಚರಣೆ ಮಾಡಿದ ಎನ್ ಐಎ ಮತ್ತು ಎನ್ ಐ ಎ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಮಾತಾಂಧ ಶಕ್ತಿಗಳನ್ನು ದೇಶದಲ್ಲಿ ನಿಷೇಧ ಮಾಡಲಾಗಿದೆ. ಕಠಿಣ ಕ್ರಮ ಮೋದಿ ಸರಕಾರದಿಂದ ಮಾತ್ರ ಸಾಧ್ಯ. ನವರಾತ್ರಿ ಸಂದರ್ಭ ದೇಶಕ್ಕೆ ಶುಭಸುದ್ದಿ ನೀಡಿದ್ದಾರೆ. ನವರಾತ್ರಿ ಸಂದರ್ಭ ದೇಶದ್ರೋಹಿಗಳನ್ನು ಮಟ್ಟ ಹಾಕುವ ನಿರ್ಧಾರ ಮಾಡಲಾಗಿದೆ. ಇದು ಇಡೀ ದೇಶದ ಜನ ಸಿಹಿ ಹಂಚುವ ಕ್ಷಣ, ಎನ್ ಐಎ ತನಿಖೆ ಸಂದರ್ಭ ಹಲವಾರು ವಿಚಾರ ಬೆಳಕಿಗೆ ಬಂದಿದೆ. ಹಿಜಾಬ್ ನ ಬೆನ್ನೆಲುಬು ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ‌. ಕರಾವಳಿ ಭಾಗದಲ್ಲಿ ಶಾಂತಿಯುತವಾಗಿರಲು ಎನ್ ಐಎ ಗೆ ಬೆಂಬಲಿಸುತ್ತೇವೆ. ಅಮಿತ್ ಶಾ ಸೂಕ್ತ ದಾಖಲೆಗಳನ್ನು ಪಡೆದು ಕ್ರಮ ಕೈಗೊಂಡಿದ್ದಾರೆ.

ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವ ಸಂಘಟನೆಗೆ ದೇಶದಲ್ಲಿ ಅವಕಾಶ ಇಲ್ಲ. ವಿದೇಶಿ ಹಣ ವರ್ಗಾವಣೆ, ಹಿಂಸೆ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರಕಾರ ಪಿಎಫ್ ಐ ಗೆ ಬೆಂಬಲವಾಗಿ ನಿಂತಿತ್ತು. ದುಷ್ಕೃತ್ಯ ದೇಶದ್ರೋಹಿ ಚಟುವಟಿಕೆಗೆ ಕಾಂಗ್ರೆಸ್ ಕಾರಣ. ಸಿದ್ದರಾಮಯ್ಯ ಸರಕಾರ 150 ಜನರ ಕೇಸು ವಾಪಾಸ್ ತೆಗೆದಿತ್ತು.

ಕರಾವಳಿ ಭಾಗ ಶಾಂತವಾಗಿರಲು ಇನ್ನು ಮುಂದೆಯೂ ಎನ್ ಎ ಏಜೆನ್ಸಿ ಗೆ ಸಹಕಾರ ನೀಡಲು ಬದ್ದರಿದ್ದವೆ ಎಂದು ಹೇಳಿದ್ದಾರೆ.

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ : ಮಯೂರ್‌ ಜಯಕುಮಾರ್‌ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago