Featured

PFI ನಿಷೇಧ : ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ: ಎಚ್​ಡಿಕೆ – Vishwanews24

PFI ನಿಷೇಧ : ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ: ಎಚ್​ಡಿಕೆ

ರಾಮನಗರ: ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಹಾಗೂ ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರ್ಕಾರ ಇಂದು(ಸೆ.28) ಆದೇಶ ಹೊರಡಿಸಿದೆ.

ಈ ಕುರಿತು ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸಮಾಜಘಾತುಕ ಶಕ್ತಿಗಳನ್ನ ನಿಯಂತ್ರಿಸುವುದು ಸರ್ಕಾರದ ಕರ್ತವ್ಯ. ಆದರೆ, ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ‌ ಎಂಬುದನ್ನ ಜನರ ಮುಂದೆ ತೆರೆದಿಡಬೇಕು. ಇದು ಸರ್ಕಾರದ ಕರ್ತವ್ಯ ಎಂದರು.

PFI ನಿಷೇಧ :ಮುಂದೆ ಯಾರೂ ಇಂತಹ ವಿದ್ವಂಸಕ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಒಂದು ಪಾಠವಾಗಬೇಕು.. 

ಬ್ಯಾನ್ ಮಾಡಿದ ತಕ್ಷಣ ಸಂಪೂರ್ಣ ಶಾಂತಿ ನೆಲಸುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ರೆ ಕಠಿಣ ಕ್ರಮ ಆಗಬೇಕು. ಸಮಾಜಘಾತುಕ ಶಕ್ತಿಗಳನ್ನ ಕಂಟ್ರೋಲ್​ನಲ್ಲಿಡುವುದು ಸರ್ಕಾರದ ಕರ್ತವ್ಯ ಎಂದ ಎಚ್​ಡಿಕೆ, ಎನ್‌ಐಎ ದಾಳಿಯ ಸತ್ಯಾಂಶಗಳನ್ನು ಜನರ ಮುಂದೆ ಇಡಬೇಕು ಎಂದು ಆಗ್ರಹಿಸಿದರು.

ಯಾವ ಯಾವ ಸಂಘಟನೆಗಳಿಂದ ದೇಶದ್ರೋಹದ ಕೆಲಸ ಆಗಿದೆ‌ ಎಂಬುದನ್ನ ಜನರಿಗೆ ಮಾಹಿತಿ ನೀಡಿ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬುದೂ ಗೊತ್ತಾಗಬೇಕು ಎಂದು ಎಚ್​ಡಿಕೆ ಹೇಳಿದರು.

PFI ನಿಷೇಧ – ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಕರ್ನಾಟಕ ಕಾಂಗ್ರೆಸ್‌ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago