ಧಾರವಾಡ: ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿ ಬ್ಯಾನ್ ಮಾಡಿದರೂ, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ ಎಂದರು.
ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಈ ದೇಶಕ್ಕೆ ಇವರು ಬದ್ಧರಾಗಿರಬೇಕು. ದೇಶದ್ರೋಹ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…