ಧಾರವಾಡ: ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿ ಬ್ಯಾನ್ ಮಾಡಿದರೂ, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ ಎಂದರು.
ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಈ ದೇಶಕ್ಕೆ ಇವರು ಬದ್ಧರಾಗಿರಬೇಕು. ದೇಶದ್ರೋಹ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು ಎಂದು ಹೇಳಿದ್ದಾರೆ.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…