ಧಾರವಾಡ: ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿ ಬ್ಯಾನ್ ಮಾಡಿದರೂ, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ ಎಂದರು.
ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಈ ದೇಶಕ್ಕೆ ಇವರು ಬದ್ಧರಾಗಿರಬೇಕು. ದೇಶದ್ರೋಹ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು ಎಂದು ಹೇಳಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…