ಧಾರವಾಡ: ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಂತಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್ಐನಂತಹ ದೇಶದ್ರೋಹಿ, ಸಮಾಜ ಕಂಟಕ, ಆತಂಕಕಾರಿಯಾದ ಈ ಸಂಘಟನೆಯನ್ನು ಮೊದಲೇ ಬ್ಯಾನ್ ಮಾಡಬೇಕಿತ್ತು. ತಡವಾಗಿ ಬ್ಯಾನ್ ಮಾಡಿದರೂ, ಈ ದೇಶಕ್ಕಾಗುವ ಗಂಡಾಂತರವನ್ನು ತಡೆಯುವ ಕೆಲಸ ಮಾಡಿದಂತಾಗಿದೆ ಎಂದರು.
ಮುಸ್ಲಿಂ ಸಮಾಜ ಇದರಿಂದ ಪಾಠ ಕಲಿಯಬೇಕು. ತಮ್ಮ ಸಮಾಜದ ಯುವಕರು ಯಾವ ದಿಕ್ಕಿನತ್ತ ಹೋಗುತ್ತಿದ್ದಾರೆ ಎಂಬುದನ್ನು ಮುಸ್ಲಿಂ ಸಮಾಜದ ಹಿರಿಯರು ತಿಳಿದುಕೊಳ್ಳಬೇಕು. ದೇಶದ್ರೋಹಿ ಚಟುವಟಿಕೆ ಮಾಡಿದಾಗ ಸರ್ಕಾರ, ಪೊಲೀಸರ ಗಮನಕ್ಕೆ ತರಬೇಕು ಎಂಬುದನ್ನು ಅವರು ತಿಳಿದುಕೊಳ್ಳಬೇಕು.
ಈ ದೇಶಕ್ಕೆ ಇವರು ಬದ್ಧರಾಗಿರಬೇಕು. ದೇಶದ್ರೋಹ ಮಾಡುವಂತ ವಿಕೃತ ಮನಸ್ಸುಳ್ಳ ಯುವಕರನ್ನು ತಡೆಯಬೇಕು. ಇದನ್ನು ಮುಸ್ಲಿಂ ಸಮಾಜದ ಮುಖಂಡರೇ ಮಾಡಬೇಕು. ಮುಸ್ಲಿಂರು ಮಾನಸಿಕತೆ ಬದಲಾವಣೆ ಮಾಡುವ ಪ್ರಕ್ರಿಯೆ ಮದರಸಾಗಳಲ್ಲೂ ಆಗಬೇಕು ಎಂದು ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…