ಮಂಗಳೂರು: ದೇಶದಲ್ಲಿ ಪಿಎಫ್ ಐ (PFI )ಸಂಘಟನೆಯನ್ನು ಐದು ವರ್ಷ ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಬೆನ್ನಲ್ಲೇ ವಿಧಾನಸಭೆಯ ವಿಪಕ್ಷ ಉಪನಾಯಕ ಯು. ಟಿ .ಖಾದರ್ ಮಾತನಾಡಿ, ಸಂವಿಧಾನಕ್ಕೆ ವಿರುದ್ಧವಾಗಿರುವ ಎಲ್ಲಾ ಸಂಘಟನೆಗಳ ವಿರು ದ್ಧ ಶ್ರೀಘ್ರದಲ್ಲೇ ಸಮಾನ ಕ್ರಮ ಕೈಗೊಳ್ಳಲಿ ಎಂದು ಕಿಡಿಕಾರಿದ್ದಾರೆ.
ಪಿಎಫ್ಐ ಮತ್ತು ಸಹವರ್ತಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶ ಹಿನ್ನೆಲೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೋಮು ದ್ವೇಷ, ದ್ವೇಷ ಸಮಾಜ, ಪರಸ್ಪರ ಅವಿಶ್ವಾಸ ಮೂಡಿಸುವುದು, ಪರಸ್ಪರ ಹಲ್ಲೆ ಕೊಲೆ ಮಾಡುವ ಯಾವುದೇ ಸಂಘ ಸಂಸ್ಥೆಗಳ ಮೇಲೆ ಸಮಾನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾರತಮ್ಯ ಮಾಡದೇ ಎಲ್ಲಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಕೋಮು ದ್ವೇಷದಿಂದ ಹತ್ಯೆಗಳಾದ ಒಂದು ಪ್ರಕರಣವನ್ನು ಮಾತ್ರ ಎನ್ಐಎಗೆ ನೀಡಲಾಗಿದೆ. ಒಂದು ಪ್ರಕರಣದಲ್ಲಿ ಮಾತ್ರ ಪರಿಹಾರ ನೀಡಲಾಗಿದೆ. ಈ ವಿಚಾರದಲ್ಲಿ ಕೂಡ ತಾರತಮ್ಯ, ದ್ವೇಷ ಇಲ್ಲದೇ, ಯಾರಿಗೂ ಅನ್ಯಾಯ ಮಾಡದೆ ಯಾರು ಇಂತಹ ಕೃತ್ಯಗಳನ್ನು ಮಾಡುತ್ತಾರೆಯೋ ಅವರ ವಿರುದ್ಧ ಯವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…