ಬೆಂಗಳೂರು : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಗಡುವನ್ನು ಮೇ 22ರವರೆಗೆ ವಿಸ್ತರಿಸಲಾಗಿದೆ. ಮೇ 22, 2022 ರೊಳಗಾಗಿ ಇ-ಕೆವಾಯ್ಸಿ ಮಾಡಿಸಬೇಕು.
ಇ-ಕೆವಾಯ್ಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ಪೋರ್ಟಲ್ನ ಪಾರಮರ್ ಕಾರ್ನರ್ನ ಇ-ಕೆವಾಯ್ಸಿ ಅವಕಾಶದಡಿ ರೈತನ (ಫಲಾನುಭವಿ) ಆಧಾರ ಸಂಖ್ಯೆಯನ್ನು ನಮೂದಿಸಿ ನಂತರ ಆಧಾರ ಸಂಖ್ಯೆ ಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ಆಧಾರ ಕಾರ್ಡನೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಗೆ ಓಟಿಪಿ ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ ಒಟಿಪಿಯನ್ನು ದಾಖಲಿಸಿ ಸಬ್ಮಿಟ್ ಪಾರ್ ಯುತ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವಾಯ್ಸಿ ಸೆಕ್ಸಸ್ ಸಬ್ಮಿಟೆಡ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಓಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವಾಯ್ಸಿ ಮಾಡಬಹುದಾಗಿದೆ.
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಮೊಬೈಲ್ ಸಂಖ್ಯೆಗೆ ಇ-ಕೆವಾಯ್ಸಿಗಾಗಿ ಕಳುಹಿಸಿದ ಓಟಿಪಿಯು ಸ್ವೀಕೃತವಾಗಿರುವುದಿಲ್ಲವೋ ಅಂತಹ ಫಲಾನುಭವಿಗಳು ಸಮೀಪದ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಯಂತ್ರದ ಮೂಖಾಂತರ ಇ-ಕೆವಾಯ್ಸಿ ಮಾಡಿಸಬಹುದಾಗಿದೆ. ಇಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ ಇ-ಕೆವಾಯ್ಸಿ ಮಾಡಲಾಗುತ್ತದೆ. 2 ನೇ ಪ್ರಕ್ರಿಯೆ (ವಿಧಾನ) ಗಾಗಿ ಮಾತ್ರ ನಾಗರಿಕ ಸೇವಾ ಕೇಂದ್ರದವರಿಗೆ 15 ರೂ.ಗಳನ್ನು ಫಲಾನುಭವಿಯು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…