ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆಯಲ್ಲಿ ನಮಗೆ ಯಾವುದೇ ವಿಶ್ವಾಸವಿಲ್ಲ. ಇದು 300 ಕೋಟಿ ರೂ.ಗಳ ಹಗರಣವಾಗಿದ್ದು, ಪಾರದರ್ಶಕ ತನಿಖೆಯಿಂದ ಮಾತ್ರ ಸತ್ಯ ಹೊರಬರಲು ಸಾಧ್ಯ. ಹೀಗಾಗಿ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಯುವುದು ಅಗತ್ಯ ಎಂದರು.
ಹಗರಣಕ್ಕೆ ಗೃಹ ಸಚಿವರು ಮತ್ತು ಸರ್ಕಾರವೇ ಹೊಣೆ. 5 ಮತ್ತು 10ನೇ ರ್ಯಾಂಕ್ ಪಡೆದ ದರ್ಶನ್ ಗೌಡ ಮತ್ತು ನಾಗೇಶ್ ಗೌಡ ಸಚಿವ ಅಶ್ವತ್ ನಾರಾಯಣ ಅವರ ಸಂಬಂಧಿಗಳಾಗಿದ್ದು, ಅವರನ್ನು ತನಿಖೆ ಮಾಡಿ ಬಿಡುಗಡೆಗೊಳಿಸಿರುವುದು ಅನುಮಾನ ಹೆಚ್ಚಲು ಕಾರಣವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು. ಆ ಮೂಲಕ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದವರು ಇದೇ ವೇಳೆ ಒತ್ತಾಯಿಸಿದರು.
ನೊಂದ ಅಭ್ಯರ್ಥಿಗಳು ಜನವರಿ 25ರಂದು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಆದರೆ ಅಲ್ಲಿಂದ ಇಲ್ಲಿವರೆಗೂ ಈ ಪತ್ರದ ಬಗ್ಗೆ ಯಾವುದೇ ಕ್ರಮ ವಹಿಸಿಲ್ಲ. ಆಗಿನ ಎಡಿಜಿಪಿ (ನೇಮಕಾತಿ) ಅಮೃತ್ ಪಾಲ್ ಮತ್ತು ಡಿವೈಎಸ್ಪಿ ಶಾಂತಕುಮಾರ್ ಅವರ ವರ್ಗಾವಣೆ ಈಗ ನಡೆದಿರುವುದು ಅಕ್ರಮಗಳಲ್ಲಿ ಭಾಗಿಯಾಗಿರುವುದಕ್ಕೆ ಪುಷ್ಠಿ ನೀಡಿದೆ. ಭಾಗಿಯಾದ ಇತರ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಸಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…