ಬೆಂಗಳೂರು: ‘ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಆರೋಪ ಮಾಡುವಾಗ ಸಣ್ಣ ಸಾಕ್ಷ್ಯವಾದರೂ ಬೇಕು. ಆದರೆ, ಜವಾಬ್ದಾರಿಯುತ ಪಕ್ಷವಾದ ಕಾಂಗ್ರೆಸ್ ಹಿಟ್ ಆ್ಯಂಡ್ ರನ್ ಮಾಡಲು ಹೊರಟಿದೆ’ ಎಂದು ಆರೋಪಿಸಿದರು.
‘ಕಾಂಗ್ರೆಸ್ ಅವಧಿಯಲ್ಲಿ ಹಲವು ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಕ್ಷದ ಕೆಲವರ ಬಂಧನ ಆಗಿದೆ. ಎಲ್ಲಿ ಅವರ ಬಣ್ಣ ಬಯಲಾಗುತ್ತದೊ ಎಂದು ಹೆದರಿ ಸಾಕ್ಷ್ಯಾಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.
ನಿಷ್ಠುರ ತನಿಖೆ: ‘ಈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದ ದೂರುಗಳನ್ನೆಲ್ಲ ಪರಿಗಣಿಸಲಾಗುವುದು. ದಾಖಲೆಗಳನ್ನು ಪರಿಶೀಲಿಸಿ, ಎಲ್ಲವನ್ನೂ ತನಿಖೆ ಮಾಡುತ್ತೇವೆ. ಮುಕ್ತ, ನಿಷ್ಪಕ್ಷಪಾತ, ನಿಷ್ಠುರ ತನಿಖೆ ಆಗಬೇಕು ಎನ್ನುವುದು ನಮ್ಮ ನಿಲುವು. ಹೀಗಾಗಿ, ಹಲವು ಅಧಿಕಾರಿಗಳ ತಂಡ ರಚಿಸಿ ಕಾರ್ಯಾಚರಣೆ ಮಾಡುತ್ತಿದ್ದೇವೆ’ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಿವ್ಯಾ ಹಾಗರಗಿಯಷ್ಟೆ ಅಲ್ಲ. ಇನ್ನೂ ಹಲವರು ಈ ಪ್ರಕರಣದಲ್ಲಿ ಇದ್ದಾರೆ. ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿದ್ದೇ ಇದಕ್ಕೆ ಸಾಕ್ಷಿ’ ಎಂದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…