Featured

PSI ನೇಮಕಾತಿ ಹಗರಣ : ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ : ಮುಖ್ಯಮಂತ್ರಿ – Vishwanews24

PSI ನೇಮಕಾತಿ ಹಗರಣ : ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ : ಮುಖ್ಯಮಂತ್ರಿ

ಬೆಂಗಳೂರು: ‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಆರೋಪ ಮಾಡುವಾಗ ಸಣ್ಣ ಸಾಕ್ಷ್ಯವಾದರೂ ಬೇಕು. ಆದರೆ, ಜವಾಬ್ದಾರಿಯುತ ಪಕ್ಷವಾದ ಕಾಂಗ್ರೆಸ್‌ ಹಿಟ್‌ ಆ್ಯಂಡ್‌ ರನ್‌ ಮಾಡಲು ಹೊರಟಿದೆ’ ಎಂದು ಆರೋಪಿಸಿದರು.

‘ಕಾಂಗ್ರೆಸ್‌ ಅವಧಿಯಲ್ಲಿ ಹಲವು ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಕ್ಷದ ಕೆಲವರ ಬಂಧನ ಆಗಿದೆ. ಎಲ್ಲಿ ಅವರ ಬಣ್ಣ ಬಯಲಾಗುತ್ತದೊ ಎಂದು ಹೆದರಿ ಸಾಕ್ಷ್ಯಾಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದರು.

ನಿಷ್ಠುರ ತನಿಖೆ: ‘ಈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದ ದೂರುಗಳನ್ನೆಲ್ಲ ಪರಿಗಣಿಸಲಾಗುವುದು. ದಾಖಲೆಗಳನ್ನು ಪರಿಶೀಲಿಸಿ, ಎಲ್ಲವನ್ನೂ ತನಿಖೆ ಮಾಡುತ್ತೇವೆ. ಮುಕ್ತ, ನಿಷ್ಪಕ್ಷಪಾತ, ನಿಷ್ಠುರ ತನಿಖೆ ಆಗಬೇಕು ಎನ್ನುವುದು ನಮ್ಮ ನಿಲುವು. ಹೀಗಾಗಿ, ಹಲವು ಅಧಿಕಾರಿಗಳ ತಂಡ ರಚಿಸಿ ಕಾರ್ಯಾಚರಣೆ ಮಾಡುತ್ತಿದ್ದೇವೆ’ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ದಿವ್ಯಾ ಹಾಗರಗಿಯಷ್ಟೆ ಅಲ್ಲ. ಇನ್ನೂ ಹಲವರು ಈ ಪ್ರಕರಣದಲ್ಲಿ ಇದ್ದಾರೆ. ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿದ್ದೇ ಇದಕ್ಕೆ ಸಾಕ್ಷಿ’ ಎಂದರು.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

1 hour ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

3 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

3 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

4 hours ago