ಬೆಂಗಳೂರು: ಇದೇ ಜನವರಿ 23ರಂದು ಪಿಎಸ್ಐ ಪರೀಕ್ಷೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹಾಲ್ಟಿಕೆಟ್, ಗುರುತಿನ ಚೀಟಿ ಹೊರತುಪಡಿಸಿ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ತರುವಂತಿಲ್ಲ ಎಂದು ಸೂಚನೆಯಲ್ಲಿ ತಿಳಿಸಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಪುರುಷ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?
* ಪೂರ್ಣ ತೋಳಿನ ಅಂಗಿಗಳನ್ನ ಧರಿಸುವಂತಿಲ್ಲ
* ಕಾಲರ್ ರಹಿತ ಶರ್ಟ್ ಹಾಗೂ ಜೇಬುಗಳು ಕಮ್ಮಿ ಇರುವ ಪ್ಯಾಂಟ್ ಧರಿಸಿರಬೇಕು
* ಕುರ್ತಾ ಪೈಜಾಮು, ಜೀನ್ಸ್ ಪ್ಯಾಂಟ್ಗಳಿಗೆ ಅನುಮತಿ ಇಲ್ಲ
* ಶರ್ಟ್ ಅಥವಾ ಪ್ಯಾಂಟ್ಗಳಿಗೆ ಜಿಪ್ ಪ್ಯಾಕೆಟ್ಗಳು, ದೊಡ್ಡ ದೊಡ್ಡ ಗುಂಡಿಗಳು, ಹೆಚ್ಚುವರಿ ಡಿಸೈನ್ ಇರಬಾರದು
* ಪರೀಕ್ಷಾ ಹಾಲ್ಗೆ ಶೂಗಳು ಕಟ್ಟು ನಿಟ್ಟಾಗಿ ನಿಷೇಧ
* ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ
* ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸುವುದು ನಿಷೇಧ
ಮಹಿಳಾ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಏನು?
* ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ
* ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ
* ಮುಜುಗರವಾಗದಂತೆ ಅರ್ಧ ತೋಳಿನ ಬಟ್ಟೆ ಬಳಸಬೇಕು
* ಇನ್ನೊಬ್ಬರಿಗೆ ಮುಜುಗರವಾಗದ ಟಾಪ್ಗಳು ಬಳಸಲು ಸೂಚನೆ
* ಹೈ ಹೀಲ್ಸ್ ಚಪ್ಪಲಿ-ಶೂಗಳನ್ನ ಧರಿಸದಂತೆ ಸೂಚನೆ
* ಮಹಿಳಾ ಅಭ್ಯರ್ಥಿಗಳಿಗೂ ಕೂಡ ಯಾವುದೇ ರೀತಿಯ ಲೋಹ, ಚೈನ್ ಬಳಸದಂತೆ ಸೂಚನೆ
* ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ
ಪರೀಕ್ಷಾ ಕೊಠಡಿಗೆ ಈ ಪತ್ರಗಳು ಕಡ್ಡಾಯ:
* ಪ್ರವೇಶ ಪತ್ರ ಕಡ್ಡಾಯವಾಗಿ ತರಬೇಕು
* ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯವಾಗಿರಬೇಕು.
ಎಲ್ಲರೂ ಈ ಸೂಚನೆ ಪಾಲಿಸಬೇಕು:
ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲರೂ ಪಾಲಿಸುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಅಲ್ಲದೇ ಎಲ್ಲಾ ಅಭ್ಯರ್ಥಿಗಳಿಗೂ ಈ ಕೆಳಗಿನ ವಸ್ತುಗಳು ಬಳಸದಂತೆ ಸೂಚನೆ ನೀಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ಡ್ರೈವ್, ಇಯರ್ ಫೋನ್, ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರಗಳನ್ನು ಪರೀಕ್ಷಾ ಹಾಲ್ಗೆ ಕೊಂಡೊಯ್ಯುವಂತಿಲ್ಲ.
ಯಾವುದೇ ರೀತಿಯ ಆಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಇರುತ್ತೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧವಿರಲಿದೆ. ಯಾವುದೇ ಅಭ್ಯರ್ಥಿ ಟೋಪಿ ಧರಿಸುವಂತಿಲ್ಲ. ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…