ಚಿಕ್ಕೋಡಿ: ಆರ್ಎಂಡಿ ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ಬೆಳಗಾವಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಇದೇ ಮೇ ತಿಂಗಳಲ್ಲಿ ಖಾಸಗಿ ಕಂಪನಿಯ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ತನಿಖೆ ಆರಂಭಿಸಿದರು. ಈ ವೇಳೆ ಆರೋಪಿಗಳು ಕೇವಲ ಆರ್ಎಂಡಿ ಮಾತ್ರ ಅಲ್ಲದೇ ವಿವಿಧ ಪಾನ್ ಮಸಲಾ ಸೇರಿದಂತೆ ದೇಶಾದ್ಯಂತ ಚಲಾವಣೆಯಲ್ಲಿರುವ ನಾನಾ ಕಂಪನಿಯ ಉತ್ಪನ್ನಗಳನ್ನು ಖೊಟ್ಟಿಯಾಗಿ ತಯಾರಿಸುತ್ತಿರುವುದು ತಿಳಿದು ಬಂದಿದೆ.
ಸದಲಗಾ ಪಟ್ಟಣದಲ್ಲಿ ರೇಡ್ ಮಾಡಿ ಆರೋಪಿಗಳ ವಿಚಾರಣೆ ನಡೆಸಿದಾಗ, ಸರ್ಕಾರಕ್ಕೆ ಆರೋಪಿಗಳಿಂದ ಕೋಟ್ಯಂಂತರ ರೂಪಾಯಿ ತೆರಿಗೆ ಹಣ ವಂಚನೆ ಆಗಿರುವ ವಿಚಾರ ಬಹಿರಂಗಗೊಂಡಿದೆ. ಸಾರ್ವಜನಿಕರ ಆರೋಗ್ಯಕ್ಕೂ ನಕಲಿ ಪಾನ್ ಮಸಾಲಾದಿಂದ ಹಾನಿಯಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ ಅಧಿಕಾರಿಗಳು, ಹೈದರಾಬಾದ್ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಬೆಂಗಳೂರು ಹಾಗೂ ದೆಹಲಿಯಲ್ಲಿ ಕೂಡ ಇವರ ನಕಲಿ ಉತ್ಪಾದನೆಯ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ಎಲ್ಲ ಸಾಮಾಗ್ರಿ, ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೀಗ ಕರ್ನಾಟಕದ ಇಬ್ಬರು, ತೆಲಂಗಾಣದ ಓರ್ವ ಹಾಗೂ ದೆಹಲಿಯ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆದು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಕಾರ್ಯವೈಖರಿಗೆ ಪಾನ್ ಮಸಾಲಾ ಕಂಪನಿಯ ಸಿಬ್ಬಂದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…