ಚಿಕ್ಕೋಡಿ: ಆರ್ಎಂಡಿ ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ಬೆಳಗಾವಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಇದೇ ಮೇ ತಿಂಗಳಲ್ಲಿ ಖಾಸಗಿ ಕಂಪನಿಯ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ತನಿಖೆ ಆರಂಭಿಸಿದರು. ಈ ವೇಳೆ ಆರೋಪಿಗಳು ಕೇವಲ ಆರ್ಎಂಡಿ ಮಾತ್ರ ಅಲ್ಲದೇ ವಿವಿಧ ಪಾನ್ ಮಸಲಾ ಸೇರಿದಂತೆ ದೇಶಾದ್ಯಂತ ಚಲಾವಣೆಯಲ್ಲಿರುವ ನಾನಾ ಕಂಪನಿಯ ಉತ್ಪನ್ನಗಳನ್ನು ಖೊಟ್ಟಿಯಾಗಿ ತಯಾರಿಸುತ್ತಿರುವುದು ತಿಳಿದು ಬಂದಿದೆ.
ಸದಲಗಾ ಪಟ್ಟಣದಲ್ಲಿ ರೇಡ್ ಮಾಡಿ ಆರೋಪಿಗಳ ವಿಚಾರಣೆ ನಡೆಸಿದಾಗ, ಸರ್ಕಾರಕ್ಕೆ ಆರೋಪಿಗಳಿಂದ ಕೋಟ್ಯಂಂತರ ರೂಪಾಯಿ ತೆರಿಗೆ ಹಣ ವಂಚನೆ ಆಗಿರುವ ವಿಚಾರ ಬಹಿರಂಗಗೊಂಡಿದೆ. ಸಾರ್ವಜನಿಕರ ಆರೋಗ್ಯಕ್ಕೂ ನಕಲಿ ಪಾನ್ ಮಸಾಲಾದಿಂದ ಹಾನಿಯಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ ಅಧಿಕಾರಿಗಳು, ಹೈದರಾಬಾದ್ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಬೆಂಗಳೂರು ಹಾಗೂ ದೆಹಲಿಯಲ್ಲಿ ಕೂಡ ಇವರ ನಕಲಿ ಉತ್ಪಾದನೆಯ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ಎಲ್ಲ ಸಾಮಾಗ್ರಿ, ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಇದೀಗ ಕರ್ನಾಟಕದ ಇಬ್ಬರು, ತೆಲಂಗಾಣದ ಓರ್ವ ಹಾಗೂ ದೆಹಲಿಯ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆದು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಕಾರ್ಯವೈಖರಿಗೆ ಪಾನ್ ಮಸಾಲಾ ಕಂಪನಿಯ ಸಿಬ್ಬಂದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…