Featured

RMD ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ದೇಶಾದ್ಯಂತ ಮಾರಾಟ ; ಐವರ ಬಂಧನ – Vishwanews24

RMD ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ದೇಶಾದ್ಯಂತ ಮಾರಾಟ ; ಐವರ ಬಂಧನ

ಚಿಕ್ಕೋಡಿ: ಆರ್‌ಎಂಡಿ ಹೆಸರಿನ ನಕಲಿ ಪಾನ್ ಮಸಲಾ ತಯಾರಿಸಿ ಬೆಳಗಾವಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಜಿಲ್ಲೆಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಇದೇ ಮೇ ತಿಂಗಳಲ್ಲಿ ಖಾಸಗಿ ಕಂಪನಿಯ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಪ್ರತ್ಯೇಕ ತಂಡವನ್ನು ರಚಿಸಿ ತನಿಖೆ ಆರಂಭಿಸಿದರು. ಈ ವೇಳೆ ಆರೋಪಿಗಳು ಕೇವಲ ಆರ್‌ಎಂಡಿ ಮಾತ್ರ ಅಲ್ಲದೇ ವಿವಿಧ ಪಾನ್ ಮಸಲಾ ಸೇರಿದಂತೆ ದೇಶಾದ್ಯಂತ ಚಲಾವಣೆಯಲ್ಲಿರುವ ನಾನಾ ಕಂಪನಿಯ ಉತ್ಪನ್ನಗಳನ್ನು ಖೊಟ್ಟಿಯಾಗಿ ತಯಾರಿಸುತ್ತಿರುವುದು ತಿಳಿದು ಬಂದಿದೆ.

ಸದಲಗಾ ಪಟ್ಟಣದಲ್ಲಿ ರೇಡ್ ಮಾಡಿ ಆರೋಪಿಗಳ ವಿಚಾರಣೆ ನಡೆಸಿದಾಗ, ಸರ್ಕಾರಕ್ಕೆ ಆರೋಪಿಗಳಿಂದ ಕೋಟ್ಯಂಂತರ ರೂಪಾಯಿ ತೆರಿಗೆ ಹಣ ವಂಚನೆ ಆಗಿರುವ ವಿಚಾರ ಬಹಿರಂಗಗೊಂಡಿದೆ. ಸಾರ್ವಜನಿಕರ ಆರೋಗ್ಯಕ್ಕೂ ನಕಲಿ ಪಾನ್ ಮಸಾಲಾದಿಂದ ಹಾನಿಯಾಗುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ ಅಧಿಕಾರಿಗಳು, ಹೈದರಾಬಾದ್ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ನಂತರ ಬೆಂಗಳೂರು ಹಾಗೂ ದೆಹಲಿಯಲ್ಲಿ ಕೂಡ ಇವರ ನಕಲಿ ಉತ್ಪಾದನೆಯ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ಎಲ್ಲ ಸಾಮಾಗ್ರಿ, ಯಂತ್ರೋಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಇದೀಗ ಕರ್ನಾಟಕದ ಇಬ್ಬರು, ತೆಲಂಗಾಣದ ಓರ್ವ ಹಾಗೂ ದೆಹಲಿಯ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಕಚ್ಚಾ ವಸ್ತುಗಳನ್ನು ವಶಕ್ಕೆ ಪಡೆದು ಐವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೊಲೀಸರ ಕಾರ್ಯವೈಖರಿಗೆ ಪಾನ್ ಮಸಾಲಾ ಕಂಪನಿಯ ಸಿಬ್ಬಂದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

1 hour ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago