Featured

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ – Vishwanews24

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ

ವಾಷಿಂಗ್ಟನ್‌: ಎಸ್‌.ಎಸ್‌ ರಾಜಮೌಳಿ ನಿರ್ದೇಶನದ ಜ್ಯೂನಿಯರ್‌ ಎನ್. ಟಿ.ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್‌.ಆರ್.ಆರ್‌ ಸಿನಿಮಾಗೆ ಮತ್ತೊಂದು ಗರಿ ಲಭಿಸಿದೆ.

ಸಿನಿಮಾದ ‘ನಾಟು ನಾಟು‘ ಹಾಡಿಗೆ 2023ರ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಾಪ್ತವಾಗಿದೆ. ‘ಬೆಸ್ಟ್‌ ಒರಿಜಿನಲ್‌ ಸಾಂಗ್‌‘ ವಿಭಾಗದಲ್ಲಿ ಈ ಹಾಡಿಗೆ ಪ್ರಶಸ್ತಿ ಲಭಿಸಿದೆ. ತೆಲುಗು ಹಾಡಿಗೆ ಈ ಗೌರವ ಲಭಿಸಿದೆ.

ತೆಲುಗು ಭಾಷೆಯ ‘ನಾಟು ನಾಟು‘ ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್‌ ಸಿಪ್ಲಿಗುಂಜ್‌ ಅವರು ಬರೆದಿದ್ದಾರೆ.

ಇಂಗ್ಲಿಷ್ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ ವಿಭಾಗದಲ್ಲಿ ಈ ಚಿತ್ರ ಆಯ್ಕೆಯಾಗಿತ್ತು. ಹಲವು ಇಂಗ್ಲಿಷೇತರ ಸಿನಿಮಾಗಳನ್ನು ಹಿಂದಿಕ್ಕಿ ಇದೀಗ ಅತ್ಯುತ್ತಮ ಹಾಡು ವಿಭಾಗದಲ್ಲಿ ‘ನಾಟು ನಾಟು‘ ಹಾಡು ಪ್ರಶಸ್ತಿ ಬಾಚಿಕೊಂಡಿದೆ.

ಇನ್ನು ಪ‍್ರಶಸ್ತಿ ಗೆದ್ದ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ‘ಎಂತಹ ಐತಿಹಾಸಿಕ ಸಾಧನೆ! ಗೋಲ್ಡನ್ ಗ್ಲೋಬ್ಸ್ ಅತ್ಯುತ್ತಮ ಮೂಲ ಹಾಡು – ಮೋಷನ್ ಪಿಕ್ಚರ್ ಪ್ರಶಸ್ತಿ ಲಭಿಸಿದೆ. ಕೀರವಾಣಿ ಅವರಿಗೆ, ರಾಜಮೌಳಿ ಅವರಿಗೆ ಹಾಗೂ ಆರ್‌.ಆರ್.ಆರ್ ಸಿನಿಮಾ ತಂಡಕ್ಕೆ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ಭಾರತವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ‘ ಎಂದು ಮೆಗಾಸ್ಟಾರ್‌ ಚಿರಂಜೀವಿ ಟ್ವೀಟ್‌ ಮಾಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago