Featured

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ – Vishwanews24

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಗೌರವ

ವಾಷಿಂಗ್ಟನ್‌: ಎಸ್‌.ಎಸ್‌ ರಾಜಮೌಳಿ ನಿರ್ದೇಶನದ ಜ್ಯೂನಿಯರ್‌ ಎನ್. ಟಿ.ಆರ್ ಮತ್ತು ರಾಮ್ ಚರಣ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್‌.ಆರ್.ಆರ್‌ ಸಿನಿಮಾಗೆ ಮತ್ತೊಂದು ಗರಿ ಲಭಿಸಿದೆ.

ಸಿನಿಮಾದ ‘ನಾಟು ನಾಟು‘ ಹಾಡಿಗೆ 2023ರ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಾಪ್ತವಾಗಿದೆ. ‘ಬೆಸ್ಟ್‌ ಒರಿಜಿನಲ್‌ ಸಾಂಗ್‌‘ ವಿಭಾಗದಲ್ಲಿ ಈ ಹಾಡಿಗೆ ಪ್ರಶಸ್ತಿ ಲಭಿಸಿದೆ. ತೆಲುಗು ಹಾಡಿಗೆ ಈ ಗೌರವ ಲಭಿಸಿದೆ.

ತೆಲುಗು ಭಾಷೆಯ ‘ನಾಟು ನಾಟು‘ ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್‌ ಸಿಪ್ಲಿಗುಂಜ್‌ ಅವರು ಬರೆದಿದ್ದಾರೆ.

ಇಂಗ್ಲಿಷ್ ಹೊರತಾದ ಅತ್ಯುತ್ತಮ ಸಿನಿಮಾ’ ಹಾಗೂ ‘ಅತ್ಯುತ್ತಮ ಹಾಡು’ ವಿಭಾಗದಲ್ಲಿ ಈ ಚಿತ್ರ ಆಯ್ಕೆಯಾಗಿತ್ತು. ಹಲವು ಇಂಗ್ಲಿಷೇತರ ಸಿನಿಮಾಗಳನ್ನು ಹಿಂದಿಕ್ಕಿ ಇದೀಗ ಅತ್ಯುತ್ತಮ ಹಾಡು ವಿಭಾಗದಲ್ಲಿ ‘ನಾಟು ನಾಟು‘ ಹಾಡು ಪ್ರಶಸ್ತಿ ಬಾಚಿಕೊಂಡಿದೆ.

ಇನ್ನು ಪ‍್ರಶಸ್ತಿ ಗೆದ್ದ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ‘ಎಂತಹ ಐತಿಹಾಸಿಕ ಸಾಧನೆ! ಗೋಲ್ಡನ್ ಗ್ಲೋಬ್ಸ್ ಅತ್ಯುತ್ತಮ ಮೂಲ ಹಾಡು – ಮೋಷನ್ ಪಿಕ್ಚರ್ ಪ್ರಶಸ್ತಿ ಲಭಿಸಿದೆ. ಕೀರವಾಣಿ ಅವರಿಗೆ, ರಾಜಮೌಳಿ ಅವರಿಗೆ ಹಾಗೂ ಆರ್‌.ಆರ್.ಆರ್ ಸಿನಿಮಾ ತಂಡಕ್ಕೆ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! ಭಾರತವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ‘ ಎಂದು ಮೆಗಾಸ್ಟಾರ್‌ ಚಿರಂಜೀವಿ ಟ್ವೀಟ್‌ ಮಾಡಿದ್ದಾರೆ.

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

9 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

9 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

10 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

10 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

11 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

11 hours ago