RSS ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ : ನಳೀನ್ ಕುಮಾರ್ ಕಟೀಲ್ – Vishwnaews24

Featured, ರಾಜ್ಯ ನ್ಯೂಸ್

RSS ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ : ನಳೀನ್ ಕುಮಾರ್ ಕಟೀಲ್ – Vishwnaews24

ಹುಬ್ಬಳ್ಳಿ: ಆರ್‌ಎಸ್‌ಎಸ್‌ಗೆ ಕೈ ಹಾಕಿದ ನೆಹರೂ ಹಾಗೂ ಇಂದಿರಾ ಗಾಂಧಿ ಅವರು ಸುಟ್ಟು ಹೋಗಿದ್ದಾರೆ, ಆರ್‌ಎಸ್‌ಎಸ್‌ ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಕೂಡ ಸುಟ್ಟು ಹೋಗುತ್ತಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. ಆದರೆ ಆರ್‌ಎಸ್‌ಎಸ್‌ ಒಂದು ಸೇವಾ ಸಂಸ್ಥೆಯಾಗಿದ್ದು, ದೇಶಭಕ್ತರನ್ನು ನಿರ್ಮಾಣ ಮಾಡುತ್ತದೆ. ಇದಕ್ಕೆ ಕೈ ಹಾಕಿದ ನೆಹರೂ ಮತ್ತು ಇಂದೀರಾ ಗಾಂಧಿ ಸುಟ್ಟು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಆರ್‍ಎಸ್‍ಎಸ್ ಚಡ್ಡಿಗೆ ಬೆಂಕಿ ಹಾಕಲು ಸಿದ್ದರಾಮಯ್ಯ ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಎಂದಿದ್ದಾರೆ.

ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚಲು ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲ, ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ದರಾಮಯ್ಯ ಬೆಂಬಲ ಮಾಡಲ್ಲ. ಅವರು ಎಲ್ಲಾ ವಿಚಾರದಲ್ಲಿ ಮಾತನಾಡಬೇಕು ಅಂತ ಮಾತನಾಡತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ನನಗೇನು ಚಡ್ಡಿ ವಿಚಾರ ಬೇಕಿಲ್ಲ, ಯಾರೂ ಬೇಕಾದರೂ ಚಡ್ಡಿ ಬಿಚ್ಚಿಕೊಳ್ಳಲಿ : ಕುಮಾರಸ್ವಾಮಿ – Vishwanews24

 

 

Leave a Reply