Featured

RSS ಗೆ ನಿರ್ಬಂಧ ವಿವಾದ : ಹೈಕೋರ್ಟ್ ಆದೇಶ ಹಿನ್ನೆಲೆ ಸರ್ಕಾರದಿಂದ ಮೇಲ್ಮನವಿ: ಪ್ರಿಯಾಂಕ್ ಖರ್ಗೆ – vishwanews24

ಆರ್‌ಎಸ್‌ಸ್‌ಗೆ ನಿರ್ಬಂಧ ವಿವಾದ : ಹೈಕೋರ್ಟ್ ಆದೇಶ ಹಿನ್ನೆಲೆ ಸರ್ಕಾರದಿಂದ ಮೇಲ್ಮನವಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸರ್ಕಾರಿ ಶಾಲಾ, ಕಾಲೇಜು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ ಹಾಕಿರುವ ಸರ್ಕಾರದ ನಡೆಗೆ ಹೈಕೋರ್ಟ್ ಅಂಕುಶ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಾವು ಮೇಲ್ಮನವಿ ಹೋಗುತ್ತೇವೆ. ನಾವು ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕೊಡುವುದಿಲ್ಲ ಎಂದು ಹೇಳಿಲ್ಲ. ಬದಲಾಗಿ, ಅನುಮತಿ ಪಡೆಯಿರಿ ಅಂತಿದ್ದೀವಿ ಎಂದು ಸ್ಪಷ್ಟಪಡಿಸಿದರು.

ಈವರೆಗೆ ಆರ್ ಎಸ್ ಎಸ್ ಏನೇನು ಬೈದಿದ್ದಾರೆ‌‌ ಗೊತ್ತಿದೆ. ಬಿಜೆಪಿ ಲೀಡರ್ ಗಳು ಏನೇನು ಬೈತಿದ್ದಾರೆ, ವೈಯಕ್ತಿಕ ವಿಚಾರಕ್ಕೆ ಏನೆಲ್ಲಾ ಹೇಳಿಕೆ ನೀಡಿದ್ದಾರೆ ಎಂಬುವುದನ್ನು ನೀವೇ ನೋಡಿದ್ದೀರಿ. ಇಷ್ಟೆಲ್ಲ ಆದಮೇಲೂ ಆರ್ ಎಸ್ ಎಸ್ ನವರು ಖಂಡಿಸಿದ್ದಾರಾ? ಎಂದು ಪ್ರಶ್ನಿಸಿದರು.

ಯಾವುದೇ ಖಾಸಗಿ ಸಂಸ್ಥೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಅನುಮತಿ ಕೇಳಲಿ, ಸೂಕ್ತ ಅನಿಸಿದರೆ ಸರ್ಕಾರ ಅನುಮತಿ ನೀಡುತ್ತದೆ. ಧಾರವಾಡ ಕೋರ್ಟ್ ನಲ್ಲಿ ಇರುವ ಬಗ್ಗೆ ಎ.ಜಿ ಯವರಿಗೆ ಮಾಹಿತಿ ಇರಲಿಲ್ಲ. ಸ್ಥಳೀಯ ಅಧಿಕಾರಿಗಳ ಲೋಪ ಇದೆ. ಎ.ಜಿಯವರಿಗೆ ಮಾಹಿತಿ ಇರಲಿಲ್ಲ ಅಂತ ಸಿಎಂಗೂ ನಮಗೂ ತಿಳಿಸಿದ್ದಾರೆ. ಇದು ಮಧ್ಯಂತರ ತಡೆಯಾಜ್ಞೆ ಅಷ್ಟೇ . ಆದರೆ ಬಿಜೆಪಿಯವರು ಈಗಾಗಲೇ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

ಅವರ ಸಂಭ್ರಮಾಚರಣೆ ಪ್ರಕಾರ ಹತ್ತು ಬಾರಿ ಪಥ ಸಂಚಲನ ಮಾಡಬೇಕಾಗಿತ್ತಲ್ವಾ? ನಾಲ್ಕೈದು ಬಾರಿ ಪಥ ಸಂಚಲನೆ ಮಾಡಬೇಕಾಗಿತ್ತಲ್ವಾ? ಇನ್ನೂ ಯಾಕೆ ಚಿತ್ತಾಪುರದಲ್ಲಿ ಪಥ ಸಂಚಲನ ಆಗಿಲ್ಲ? ನಿನ್ನೆ ನಡೆದ ಶಾಂತಿ ಸಭೆಯ ಎಲ್ಲ ಮಾಹಿತಿ ಆಡಿಯೋ ವೀಡಿಯೋ ರೆಕಾರ್ಡ್ ಆಗಿದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಾರೆ. ನ್ಯಾಯಾಲಯ ನಿರ್ಧಾರ ಮಾಡಲಿ ಎಂದರು.

ಮೊದಲು ಬಿಜೆಪಿಯವರು ಕ್ಷಮೆ ಕೇಳಲಿ ನನಗೆ ವೈಯಕ್ತಿಕ ಟೀಕೆ ಬೆದರಿಕೆ ಹಾಕಿದ್ದಕ್ಕೆ. ಬಿಜೆಪಿಯವರು ಒಬ್ಬರಾದರೂ ಕ್ಷಮೆ ಕೇಳಿದ್ದಾರಾ? ಬಿಜೆಪಿ ವಿಪಕ್ಷ ನಾಯಕರು ನನಗೆ ನಾಯಿ ಅಂದುಬಿಟ್ಟು. ನಮ್ಮ ಕ್ಷೇತ್ರಕ್ಕೇ ಬರ್ತಾರೆ ನಾವು ಸನ್ಮಾನ ಮಾಡಬೇಕಾ? ಬೆಳೆ ಹಾನಿ ಆದಾಗ ಇವರು ಒಮ್ಮೆಯೂ ಬರಲಿಲ್ಲ? ಯಾಕೆ ಬಂದಿಲ್ಲ ಆರ್ ಎಸ್ ಎಸ್ ಪಥ ಸಂಚಲನಕ್ಕೆ? ಕಾನೂನನ್ನು ಅವರಿಗೆ ಬೇಕಾದಂತೆ ಅರ್ಥೈಸುವುದು ದಿನ ನಿತ್ಯದ ರೂಢಿ ಆಗಿಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

ಕಾನೂನು ಅನುಮತಿ ಪಡೆಯಬೇಕಾಗಿರುವುದು ಯಾರ ಕೆಲಸ? ಕಾನೂನು ಕಾಪಾಡಬೇಕಾಗಿರುವುದು ಸರ್ಕಾರದ ಕೆಲಸ? ನಾನು ಯಾವತ್ತೂ ಆರ್ ಎಸ್ ಎಸ್‌ ಬ್ಯಾನ್ ಮಾಡಿ ಅಂತ ಹೇಳಿಲ್ಲ. ಬೆಂಗಳೂರು ಆದೇಶವೇ ಇಡೀ ರಾಜ್ಯ ವ್ಯಾಪ್ತಿಯಲ್ಲಿ ಬಂದಿದೆ ಎಂದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

19 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

21 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

21 hours ago