ಬೆಳಗಾವಿ : RSS, ಬಜರಂಗದಳವನ್ನು ಬ್ಯಾನ್ ಮಾಡಿದರೆ ಪ್ರಯೋಜನವಿಲ್ಲ, ಕಾರ್ಯಕರ್ತರನ್ನು ರಿಪೇರಿ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಆರ್ಎಸ್ಎಸ್, ಬಜರಂಗ ದಳ ನಿಷೇಧ ವಿಷಯದ ಕುರಿತು ಮಾತನಾಡಿದ ಅವರು ಹೀಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಒಳಗೆ ಚರ್ಚೆ ನಡೆದು ನಂತರ ಕ್ರಮ ಜರುಗಿಸಬೇಕಿರುವುದರಿಂದ ತಕ್ಷಣಕ್ಕೆ ಯಾವುದೇ ಕ್ರಮವಿಲ್ಲ ಎಂದರು. ಆರ್ಎಸ್ಎಸ್, ಬಜರಂಗದಳವನ್ನು ಬ್ಯಾನ್ ಮಾಡಿದರೆ ಪ್ರಯೋಜನವಿಲ್ಲ, ಅದರಲ್ಲಿ ಇರೋರನ್ನು ಹೊರಗೆ ತೆಗೆದು ರಿಪೇರಿ ಮಾಡಬೇಕು ಎಂದರು.
ಸಂಘವನ್ನು ಬ್ಯಾನ್ ಮಾಡಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಅಲ್ಲಿರುವ ಶೂದ್ರರನ್ನು ಹೊರ ತಂದು ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಹೇಳಿ ಅವರ ಮನಪರಿವರ್ತನೆ ಮಾಡಬೇಕು. .ಬಿಜೆಪಿಯವರು ತಾಕತ್ತಿದ್ದರೆ ಬ್ಯಾನ್ ಮಾಡಿನೋಡಿ ಎಂದು ಧಮ್ಕಿ ಹಾಕುತ್ತಾರೆ. ಅವರಿಗೆ ನಾನು ಹೇಳುವುದೆಂದರೆ ನೀವು ತಾಕತ್ತಿದ್ದರೆ ಕಾನೂನು ಉಲ್ಲಂಘನೆ ಮಾಡಿ ನೋಡಿ ಆಗ ಅಂಬೇಡ್ಕರ್ ಅವರ ಸಂವಿಧಾನದ ಪವರ್ ಏನು ಎಂದು ನಾವು ತೋರಿಸುತ್ತೇವೆ ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…