ಬೆಳಗಾವಿ : RSS, ಬಜರಂಗದಳವನ್ನು ಬ್ಯಾನ್ ಮಾಡಿದರೆ ಪ್ರಯೋಜನವಿಲ್ಲ, ಕಾರ್ಯಕರ್ತರನ್ನು ರಿಪೇರಿ ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಆರ್ಎಸ್ಎಸ್, ಬಜರಂಗ ದಳ ನಿಷೇಧ ವಿಷಯದ ಕುರಿತು ಮಾತನಾಡಿದ ಅವರು ಹೀಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಒಳಗೆ ಚರ್ಚೆ ನಡೆದು ನಂತರ ಕ್ರಮ ಜರುಗಿಸಬೇಕಿರುವುದರಿಂದ ತಕ್ಷಣಕ್ಕೆ ಯಾವುದೇ ಕ್ರಮವಿಲ್ಲ ಎಂದರು. ಆರ್ಎಸ್ಎಸ್, ಬಜರಂಗದಳವನ್ನು ಬ್ಯಾನ್ ಮಾಡಿದರೆ ಪ್ರಯೋಜನವಿಲ್ಲ, ಅದರಲ್ಲಿ ಇರೋರನ್ನು ಹೊರಗೆ ತೆಗೆದು ರಿಪೇರಿ ಮಾಡಬೇಕು ಎಂದರು.
ಸಂಘವನ್ನು ಬ್ಯಾನ್ ಮಾಡಿದರೆ ಮತ್ತೊಂದು ಹುಟ್ಟಿಕೊಳ್ಳುತ್ತದೆ. ಆದ್ದರಿಂದ ಅಲ್ಲಿರುವ ಶೂದ್ರರನ್ನು ಹೊರ ತಂದು ಬಸವಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಹೇಳಿ ಅವರ ಮನಪರಿವರ್ತನೆ ಮಾಡಬೇಕು. .ಬಿಜೆಪಿಯವರು ತಾಕತ್ತಿದ್ದರೆ ಬ್ಯಾನ್ ಮಾಡಿನೋಡಿ ಎಂದು ಧಮ್ಕಿ ಹಾಕುತ್ತಾರೆ. ಅವರಿಗೆ ನಾನು ಹೇಳುವುದೆಂದರೆ ನೀವು ತಾಕತ್ತಿದ್ದರೆ ಕಾನೂನು ಉಲ್ಲಂಘನೆ ಮಾಡಿ ನೋಡಿ ಆಗ ಅಂಬೇಡ್ಕರ್ ಅವರ ಸಂವಿಧಾನದ ಪವರ್ ಏನು ಎಂದು ನಾವು ತೋರಿಸುತ್ತೇವೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…