ಬೆಂಗಳೂರು: ಆರ್ಎಸ್ಎಸ್ ಸಂಘಟನೆ ಇಲ್ಲದೆ ಹೋಗಿದ್ದರೆ ಭಾರತ, ಪಾಕಿಸ್ತಾನ ಆಗುತಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದನ್ನು ಸಹಿಸಲು ಆಗದೇ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಎಂದರೆ ದೇಶಭಕ್ತಿ ಸಂಸ್ಥೆ. ದೇಶದ ಪರ ಕೆಲಸ ಮಾಡುತ್ತಿದೆ. ಆರ್ಎಸ್ಎಸ್ ಇಲ್ಲವೆಂದಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ತಾಲಿಬಾನ್ ಪದ ಬಳಕೆ ಮಾಡಿದ್ದ ಸಿದ್ದರಾಮಯ್ಯ ವಿರುದ್ಧವೂ ಚವ್ಹಾಣ್ ಆಕ್ರೋಶ ಹೊರ ಹಾಕಿದ್ದು, ಪಾಕಿಸ್ತಾನ, ತಾಲಿಬಾನ್ ಎಲ್ಲವೂ ಕಾಂಗ್ರೆಸ್ ಅವರೇ. ನಾವು ದೇಶಭಕ್ತರು. ಪ್ರಧಾನಿ ಮೋದಿ ನಾವೆಲ್ಲ ಒಂದು ಎನ್ನುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಲಿ. ಮಾಜಿ ಮುಖ್ಯಮಂತ್ರಿ ಆದವರು ಹೇಗೆ ಮಾತಾಡಬೇಕು ಎಂದು ಅರ್ಥ ಮಾಡಿಕೊಳ್ಳಬೇಕು. ಆರ್ಎಸ್ಎಸ್ ಏನು ಎಂದು ಜನತೆಗೆ ಗೊತ್ತಿದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸುತ್ತೇನೆ. ಆರ್ಎಸ್ಎಸ್ ಇರೋದಕ್ಕೆ ದೇಶ ಇದೆ. ನಾವು ದೇಶ ಸೇವೆ ಮಾಡುತ್ತಿದ್ದೇವೆ ಎಂದು ಚಾಟಿ ಬೀಸಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…