ಬೆಂಗಳೂರು: ಆರ್ಎಸ್ಎಸ್ ಸಂಘಟನೆ ಇಲ್ಲದೆ ಹೋಗಿದ್ದರೆ ಭಾರತ, ಪಾಕಿಸ್ತಾನ ಆಗುತಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಇದನ್ನು ಸಹಿಸಲು ಆಗದೇ ಹೀಗೆಲ್ಲಾ ಮಾತನಾಡುತ್ತಿದ್ದಾರೆ. ಆರ್ಎಸ್ಎಸ್ ಎಂದರೆ ದೇಶಭಕ್ತಿ ಸಂಸ್ಥೆ. ದೇಶದ ಪರ ಕೆಲಸ ಮಾಡುತ್ತಿದೆ. ಆರ್ಎಸ್ಎಸ್ ಇಲ್ಲವೆಂದಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಇದೇ ವೇಳೆ ತಾಲಿಬಾನ್ ಪದ ಬಳಕೆ ಮಾಡಿದ್ದ ಸಿದ್ದರಾಮಯ್ಯ ವಿರುದ್ಧವೂ ಚವ್ಹಾಣ್ ಆಕ್ರೋಶ ಹೊರ ಹಾಕಿದ್ದು, ಪಾಕಿಸ್ತಾನ, ತಾಲಿಬಾನ್ ಎಲ್ಲವೂ ಕಾಂಗ್ರೆಸ್ ಅವರೇ. ನಾವು ದೇಶಭಕ್ತರು. ಪ್ರಧಾನಿ ಮೋದಿ ನಾವೆಲ್ಲ ಒಂದು ಎನ್ನುತ್ತಿದ್ದಾರೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಲಿ. ಮಾಜಿ ಮುಖ್ಯಮಂತ್ರಿ ಆದವರು ಹೇಗೆ ಮಾತಾಡಬೇಕು ಎಂದು ಅರ್ಥ ಮಾಡಿಕೊಳ್ಳಬೇಕು. ಆರ್ಎಸ್ಎಸ್ ಏನು ಎಂದು ಜನತೆಗೆ ಗೊತ್ತಿದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸುತ್ತೇನೆ. ಆರ್ಎಸ್ಎಸ್ ಇರೋದಕ್ಕೆ ದೇಶ ಇದೆ. ನಾವು ದೇಶ ಸೇವೆ ಮಾಡುತ್ತಿದ್ದೇವೆ ಎಂದು ಚಾಟಿ ಬೀಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…