SC , ST ಮೀಸಲಾತಿ ಹೆಚ್ಚಳ : 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

SC , ST ಮೀಸಲಾತಿ ಹೆಚ್ಚಳ : 9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ : ಸಿಎಂ ಬೊಮ್ಮಾಯಿ

ದಾವಣಗೆರೆ : ಎಸ್ ಸಿ ಎಸ್ ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳವನ್ನು9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ನಿನ್ನೆ ‘ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ’ ಅಂಗವಾಗಿ ‘ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪಾಲ್ಗೊಂಡು ಮಾತನಾಡಿ, ನಾಗಮೋಹನ್ ದಾಸ್ ವರದಿಯಂತೆ ತುಳಿತಕ್ಕೊಳಗಾಗಿರುವ ಸಮಾಜದವರ ಪರವಾಗಿ ನ್ಯಾಯ ನೀಡಲಾಗಿದೆ.. ಎಸ್ ಸಿ ವರ್ಗಕ್ಕೆ ಶೇ. 15 ರಿಂದ ಶೇ. 17 ಮತ್ತು ಎಸ್ ಟಿ ಗೆ 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ತಳಸಮುದಾಯದ ಯುವಜನತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಈ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ಈಗಾಗಲೇ ಸರ್ಕಾರ ನೀಡಿದೆ.. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಮೀಸಲಾತಿ ಹೆಚ್ಚಳವನ್ನು ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಸರ್ಕಾರದ ನೇಮಕಾತಿಗಳಲ್ಲಿ ಈ ನಿಯಮವನ್ನು ಈಗಾಗಲೇ ಪಾಲಿಸಲಾಗುತ್ತಿದೆ ಎಂದರು.

ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ವಿಮಾನ ನಿಲ್ದಾಣ ಲೋಕಾರ್ಪಣೆ – Vishwanews24

ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಪ್ರತ್ಯೇಕ ಸಚಿವಾಲಯ 
ನಾನು ಬಯಸಿ ಮುಖ್ಯಮಂತ್ರಿಯಾದವನಲ್ಲ. ನಮ್ಮನಾಯಕರು ಹಾಗೂ ಜನರಿಂದ ಈ ಆಶೀರ್ವಾದ ನನಗೆ ದೊರೆಯಿತು. ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. 75 ಯೂನಿಟ್ ಉಚಿತ ವಿದ್ಯುತ್ , ಸಮುದಾಯದ ರೈತರಿಗೆ ಜಮೀನು ಖರೀದಿಗೆ 25 ಲಕ್ಷದವರೆಗೆ ಅನುದಾನ, ಮನೆ ನಿರ್ಮಾಣಕ್ಕೆ 2 ಲಕ್ಷ, ಹಾಸ್ಟೆಲ್ ಗಳ ಹೆಚ್ಚಳ ಮಾಡಲಾಗಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡಲಾಗುತ್ತಿದೆ. ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ ಶ್ರೀಮತಿ ದ್ರೌಪದಿ ಮುರ್ಮು ಅವರು ಗೌರವಾನ್ವಿತ ರಾಷ್ಟ್ರಪತಿಗಳಾಗಿದ್ದಾರೆ. ಸಮುದಾಯದ ಜನನಾಯಕರಿಗೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನಗಳನ್ನು ನೀಡಲಾಗಿದೆ ಎಂದರು.

ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿ, ಸಚಿವರಾದ ಆನಂದ್ ಸಿಂಗ್, ಶಾಸಕ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡುವುದು ಬೇಡ : ಯಡಿಯೂರಪ್ಪ – VIshwanews24

Leave a Reply