Scdcc ಬ್ಯಾಂಕ್ ಮತ್ತು ನವೋದಯ ಗ್ರಾ.ವಿ.ಚಾರಿಟೇಬಲ್ ಟ್ರಸ್ಟ್ – ಕಾಪು ವಿಧಾನಸಭಾ ಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕಿಯರಿಗೆ ಕಿಟ್ ವಿತರಣೆ. vishwanews24 video

Scdcc ಬ್ಯಾಂಕ್ ಮತ್ತು ನವೋದಯ ಗ್ರಾ.ವಿ.ಚಾರಿಟೇಬಲ್ ಟ್ರಸ್ಟ್ – ಕಾಪು ವಿಧಾನಸಭಾ ಕ್ಷೇತ್ರದ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕಿಯರಿಗೆ ಕಿಟ್ ವಿತರಣೆ.

ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರೋನಾ ವಿರುದ್ಧ ಸೇವೆ ಸಲ್ಲಿಸುತ್ತಿರುವ ಮೂರು ಸಾವಿರ ಆಶಾ ಕಾರ್ಯಕರ್ತೆಯರಿಗೆ ಪಡಿತರ ಕಿಟ್ ಮತ್ತು ಸಹಾಯ ಧನದ ಕಿಟ್ ವಿತರಣೆ ಕಾರ್ಯಕ್ರಮದ ಅಂಗವಾಗಿ ಕಾಪು ವಿಧಾನಸಭಾ ಕ್ಷೇತ್ರದ ಸುಮಾರು 206 ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಪ್ರೇರಕಿಯರಿಗೆ ಕಾಪುವಿನಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ಕಿಟ್ ವಿತರಿಸಿದರು.

 

ತದನಂತರ ಮಾತಾಡಿದ ಅವರು”ಕೊರೋನಾ ವಿರುದ್ದ ಕೆಲಸ ಮಾಡುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾಗಿದ್ದು,ಪ್ರಾಮಾಣಿಕ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವಿಸುವುದು ಧರ್ಮ ಮತ್ತು ಕರ್ತವ್ಯ.ಉಡಪಿ ಜಿಲ್ಲೆ ಕೊರೋನಾ ಹತೋಟಿಯಲ್ಲಿದೆ ಯಾರು ಕೂಡ ಮೈಮರೆದು ವರ್ತಿಸಬಾರದು,ದಾನಿಗಳ ಸಹಕಾರದಿಂದ ಇಡೀ ಉಡುಪಿ ಜಿಲ್ಲೆಯಲ್ಲಿ ಕಿಟ್ ವಿತರಣೆ ಮತ್ತು ಊಟದ ವ್ಯವಸ್ಥೆ ಆಗುತ್ತಿದೆ ಇದೊಂದು ರಾಜ್ಯಕ್ಕೆ ಮಾದರಿ” ಎಂದರು.

ಪ್ರಸ್ವಾವಿಕ ಮಾತುಗಳನ್ನಾಡಿದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಡಾ ದೇವಿಪ್ರಸಾದ್ ಶೆಟ್ಟಿ “ಡಾ.ಎಮ್ ಎನ್ ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕೊರೋನಾ ವಿರುದ್ದ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮತ್ತು ನವೋದಯ ಸ್ವಸಹಾಯ ಸಂಘದ ಪ್ರೇರಕಿಯರಿಗೆ ಆಹಾರ ಕಿಟ್ ವಿತರಣೆ ಮತ್ತು ಪ್ರೋತ್ಸಾಹ ಧನಸಹಾಯ ನೀಡುವ ಯೋಜನೆ ಇದಾಗಿದ್ದುಸ್ವಾರ್ಥ ರಹಿತ ಸೇವೆ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಗೆ ಹಲ್ಲೆ ಅಥಾವ ಬೆದರಿಕೆ ಹಾಕುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವ ಕಾರ್ಯ ಮಾಡಬೇಕೆಂದರು.

ಈ ಸಂಧರ್ಭದಲ್ಲಿ ಕಾಪು ತಾಲೂಕು ತಹಶಿಲ್ದಾರ್ ಮಹಮ್ಮದ್ ಇಸಾಕ್, ಕಾಪು ಆರೋಗ್ಯ ಕೇಂದ್ರದ ವೈಧ್ಯಧಿಕಾರಿ ಸುಬ್ರಯಾ ಕಾಮತ್, SCDCC ಬ್ಯಾಂಕಿನ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ,ಕರ್ನಾಟಕ ರಾಜ್ಯ ಹಾಲು ಮಾರಾಟ ಮಹಾ ಮಂಡಳಿಯ ನಿರ್ದೇಶಕ ಕಾಪು ದಿವಾಕರ್ ಶೆಟ್ಟಿ,ಪಡುಬಿದ್ರಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ವೈ.ಸುಧಿರ್ ಕುಮಾರ್,ಶಿರ್ವ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಕುತ್ಯಾರ್ ಪ್ರಸಾದ್ ಶೆಟ್ಟಿ,ಮೂಡಬೆಳ್ಳೆ ಸಿ.ಎ ಬ್ಯಾಂಕ್ ಅಧ್ಯಕ್ಷ ಶಿವಾಜಿ ಸುವರ್ಣ, ಕಟಪಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಇಂದುಶೇಖರ್ ಸುವರ್ಣ,ಕಾಪು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಮಾಧವ ಆರ್ ಪಾಲನ್,ಕಾಪು ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್ ಶಾಖಾ ಪ್ರಬಂಧಕ ಪ್ರಬೋದ್ಚಂದ್ರ,ನವೋದಯ ಸ್ವ.ಸಂಘದ ಮೇಲ್ವಿಚಾರಕರಾದ ಹರೀನಾಥ್,ಬಾಲಕೃಷ್ಣ ಭಟ್,ಚಂದ್ರಶೇಖರ ಉಪಸ್ಥಿತರಿದ್ದರು.

 

 

Facebook video News

Youtube video News

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago