SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24

Featured, ದಕ್ಷಿಣ ಕನ್ನಡ

SCDCC ಬ್ಯಾಂಕ್ ಮಂಗಳೂರು- ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅಂಗಾರ ಎಸ್ ಗೆ ಅಭಿನಂದನಾ ಸಮಾರಂಭ.-vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು‌ ನಿಯಮಿತ ಮಂಗಳೂರು ಇದರ ವತಿಯಿಂದ ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ‌ನೇಮಕಗೊಂಡ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಅಂಗಾರ ಎಸ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿ ನೇಮಕಗೊಂಡಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನಾ ಸನ್ಮಾನ ಕಾರ್ಯಕ್ರಮ ಬ್ಯಾಂಕ್ ನ‌ ಸಭಾಂಗಣದಲ್ಲಿ ನಡೆಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳ ನಿ‌., ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ|ಎಮ್.ಎನ್ ರಾಜೇಂದ್ರ ಕುಮಾರ್ ವಹಿಸಿದ್ದರು.

ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ‌ಇದರ ಅಧ್ಯಕ್ಷ ಬೆಳ್ಳಿ ಪ್ರಕಾಶ್,ನಬಾರ್ಡ್ ನ ಮುಖ್ಯ ಮಹಾ ಪ್ರಬಂಧಕ ನೀರಾಜ್ ಕುಮಾರ್ ವರ್ಮ,ಯಶ್ಪಾಲ್ ಸುವರ್ಣ, ಇಂದ್ರಾಳಿ‌ ಜಯಕರ ಶೆಟ್ಟಿ,ಬ್ಯಾಂಕಿನ ನಿರ್ದೇಶಕರುಗಳು, ಮೊದಲಾದವರು ಉಪಸ್ಥಿತರಿದ್ದರು.

ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24