ಕಾಪು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ (ಕಾಪು ) ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರದ ನಿರ್ಗಮನ ಅಧ್ಯಕ್ಷರಾದ ಹನೀಫ್ ಮೂಳೂರು ರವರ ಅಧ್ಯಕ್ಷತೆಯಲ್ಲಿ ಉಚ್ಚಿಲದ ತವಕ್ಕಲ್ ಸಭಾಭವನದಲ್ಲಿ ನಡೆಯಿತು.
ಪ್ರತೀ ಮೂರು ವರ್ಷಗಳಿಗೆ ಒಮ್ಮೆ ನಡೆಯುವ ಆಂತರಿಕ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಎಸ್ಡಿಪಿಐ ಕಾಪು ಕ್ಷೇತ್ರದ ನೂತನ ಅಧ್ಯಕ್ಷರಾಗಿ ಸಾದಿಕ್ ಕೆ ಪಿ ಮಲ್ಲಾರ್ , ಉಪಾಧ್ಯಕ್ಷರಾಗಿ ಹನೀಫ್ ಮೂಳೂರು , ಕಾರ್ಯದರ್ಶಿಯಾಗಿ ನೂರ್ ನವಾಝ್ ಉಚ್ಚಿಲ , ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಮಲ್ಲಾರ್ ಮತ್ತು ಕೋಶಾಧಿಕಾರಿಯಾಗಿ ಫಾರೂಕ್ ಉದ್ಯಾವರ ರವರು ಆಯ್ಕೆಯಾದರು.
ಸಮಿತಿ ಸದಸ್ಯರಾಗಿ ಹಮೀದ್ ಉಚ್ಚಿಲ, ಇಬ್ರಾಹಿಂ ಕಂಚಿನಡ್ಕ್, ಮಹಮ್ಮದ್ ಕಟಪಾಡಿ ಹಾಗೂ ತೌಫೀಕ್ ಬಗ್ಗತೋಟ ಆಯ್ಕೆಯಾದರು.
ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ಎಸ್ಡಿಪಿಐ ಕಾಪು ಕ್ಷೇತ್ರದ ನಿರ್ಗಮನ ಅಧ್ಯಕ್ಷರಾದ ಹನೀಫ್ ಮೂಳೂರು ಧ್ವಜಾರೋಹಣದ ಮೂಲಕ ಸಭೆಗೆ ಚಾಲನೆ ನೀಡಿದರು. ನಂತರ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ರವರು ನಾಯಕತ್ವದ ಕುರಿತು ತರಬೇತಿ ನೀಡಿದರು .
ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವ ಮತ್ತು ಶಫೀಕ್ ಉಡುಪಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಮಜೀದ್ ಪೊಲ್ಯ, ಜಿಲ್ಲಾ ಸಮಿತಿ ಸದಸ್ಯರಾದ ರಝಕ್ ವೈ ಎಸ್ ಉಚ್ಚಿಲ, ಹಾಗೂ ಇಬ್ರಾಹಿಂ ಹರ್ಷ್, ಉಡುಪಿ ವಿಮ್ ಜಿಲ್ಲಾಧ್ಯಕ್ಷೆ ನಾಝಿಯಾ ನಸ್ರುಲ್ಲ, ವಿಮ್ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷೆ ಫರ್ಝಾನ ಹಮೀದ್, ಸೇರಿದಂತೆ ಕ್ಷೇತ್ರ,
ಗ್ರಾಮ ಸಮಿತಿ, ಹಾಗೂ ಪುರಸಭೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…