ಬೆಂಗಳೂರು : ಡಿಜೆ ಹಳ್ಳಿ ಗಲಭೆ ನಂತರ ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಸಾಕಷ್ಟು ಒತ್ತಾಯದ ಮಾತುಗಳು ಕೇಳಿ ಬಂದಿತ್ತು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈಗ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯ ನಿಷೇಧಕ್ಕೆ ಒಮ್ಮತದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಇಂದು ರಾಜ್ಯ ಸಚಿವ ಸಂಪುಟ ಸಭೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧಿಸುವ ಕುರಿತಂತೆ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧ ಮಾಡುವ ಕುರಿತಂತೆ, ಎಸ್ ಡಿ ಪಿ ಐ ಸಂಘಟನೆ ರಾಜ್ಯದಲ್ಲಿ ದುಷ್ಕೃತ್ಯ ನಡೆಸಿದ ಬಗ್ಗೆ ಸಾಕ್ಷ್ಯ ಕಲೆ ಹಾಕಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಿದೆ. ವರದಿಯಲ್ಲಿ ಎಸ್ ಡಿ ಪಿ ಐ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಕೂಡ ಮಾಡಲಿದೆ.
ಎಸ್ಡಿಪಿಐ ಬ್ಯಾನ್ ಶಿಫಾರಸಿಗೆ ದಾಖಲೆ ಕಲೆಹಾಕಿ ಪಕ್ಕಾ ವರದಿ ನೀಡುವಂತೆ ಕೇಳಲಾಗಿದೆ. ಕಾನೂನು ಮತ್ತು ಗೃಹ ಇಲಾಖೆ ವರದಿ ಬಳಿಕ ಶಿಫಾರಸು ಮಾಡಲು ನಿರ್ಧರಿಸಲಾಗಿದೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…